ಬೆಂಗಳೂರು: ಕಾಂಗ್ರೆಸ್ ಸರಕಾರ ಉಪಚುನಾವಣೆಯ ಕ್ಲೀನ್ ಸ್ವೀಪ್ ಗೆಲುವಿಗೆ ಪಂಚ ಗ್ಯಾರಂಟಿಗಳೇ ಕಾರಣ ಎಂದು ಹೇಳುತ್ತಿದ್ದರೂ ಗ್ಯಾರಂಟಿಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಆಕ್ಷೇಪ ಎತ್ತಲು ತೊಡಗಿದ್ದಾರೆ. ಐದು ಗ್ಯಾರಂಟಿಗಳಲ್ಲಿ ಎರಡನ್ನು ಕೈ ಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಶಾಸಕ ಗವಿಯಪ್ಪ ಹೇಳಿದ್ದಾರೆ.
ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರುತ್ತಿಲ್ಲ. ಶಕ್ತಿ ಯೋಜನೆ ಸೇರಿದಂತೆ ಇನ್ನೆರಡು ಗ್ಯಾರಂಟಿಗಳು ಕಡಿಮೆ ಮಾಡಲು ಮುಖ್ಯಮಂತ್ರಿಗಳಿಗೆ ಹೇಳುತ್ತೇವೆ. ಅವರೇನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದು ಹೇಳಿದ್ದಾರೆ.
ನಮ್ಮ ಕ್ಷೇತ್ರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ. ಇದಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡರೇ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಶಾಸಕ ಎಚ್.ಆರ್ ಗವಿಯಪ್ಪ ಹೊಸಪೇಟೆ ಪಾಲಿಗೆ ಶಾಪವಾಗಿದ್ದಾರೆ ಎಂದು ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಕಿಡಿಕಾರಿದ್ದರು. ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂದು ವಿಪಕ್ಷಗಳು ಆರೋಪ ಮಾಡುತ್ತಿರುವ ನಡುವೆಯೇ ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರ ಈ ಹೇಳಿಕೆಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅನುದಾನವಿಲ್ಲದೆ ಜನರ ಆಕ್ರೋಶಕ್ಕೆ ತುತ್ತಾಗುವ ಭೀತಿಯಲ್ಲಿ ಗವಿಯಪ್ಪ ಸೇರಿ ಹಲವು ಶಾಸಕರು ಗ್ಯಾರಂಟಿಗಳ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ.
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…