Featured

ಐದು ರಾಜ್ಯಗಳಲ್ಲಿ ನಡೆಯುವ ಚುನಾವಣೆಯಲ್ಲಿ ನಾವು ಮೂರು ರಾಜ್ಯದಲ್ಲಿ ಗೆಲುವು ಸಾಧಿಸುತ್ತೇವೆ : ನಳಿನ್‌ ಕುಮಾರ್‌ -Vishwanews24

ಐದು ರಾಜ್ಯಗಳಲ್ಲಿ ನಡೆಯುವ ಚುನಾವಣೆಯಲ್ಲಿ ನಾವು ಮೂರು ರಾಜ್ಯದಲ್ಲಿ ಗೆಲುವು ಸಾಧಿಸುತ್ತೇವೆ : ನಳಿನ್‌ ಕುಮಾರ್‌ -Vishwanews24

ಎರಡು ರಾಜ್ಯಗಳಲ್ಲಿ ಬಿಜೆಪಿ ಹೊಸದಾಗಿ ಖಾತೆ ತೆರೆಯಲಿದೆ..

ಕಾಂಗ್ರೆಸ್‌ ಒಂದು ರಾಜ್ಯವಾದರೂ ಗೆದ್ದು ತೋರಿಸಲಿ..

ಗೋಕಾಕ, : ”ಐದು ರಾಜ್ಯಗಳಲ್ಲಿ ನಡೆಯುವ ಚುನಾವಣೆಯಲ್ಲಿ ನಾವು ಮೂರು ರಾಜ್ಯದಲ್ಲಿ ಗೆಲುವು ಸಾಧಿಸುತ್ತೇವೆ. ಆದರೆ ಕಾಂಗ್ರೆಸ್‌ ಒಂದು ರಾಜ್ಯವಾದರೂ ಗೆದ್ದು ತೋರಿಸಲಿ” ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣ್‌ದೀಪ್‌ ಸಿಂಗ್‌ ಸುರ್ಜೇವಾಲಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಸವಾಲೆಸೆದಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಪರವಾಗಿ ಪಟ್ಟಣದಲ್ಲಿ ಭಾನುವಾರ ರೋಡ್‌ ಶೋ ನಡೆಸಿ ಮಾತನಾಡಿದ ಸಂದರ್ಭ ನಳಿನ್‌ ಕುಮಾರ್‌ ಕಟೀಲ್‌ ಅವರು, ಉಪಚುನಾವಣೆಯ ಫಲಿತಾಂಶವು ಬಿಜೆಪಿ ಪತನಕ್ಕೆ ಮುನ್ನುಡಿಯಾಗುತ್ತೆ ಎಂಬ ರಣ್‌ದೀಪ್‌ ಸಿಂಗ್‌ ಸುರ್ಜೇವಾಲಾ ಅವರ ಹೇಳಿಗೆ ತಿರುಗೇಟು ನೀಡಿದರು.

”ಐದು ರಾಜ್ಯಗಳ ಪೈಕಿ ಬಿಜೆಪಿ ಮೂರು ರಾಜ್ಯದಲ್ಲಿ ಗೆಲುವು ಸಾಧಿಸಲಿದೆ. ಈ ಪೈಕಿ ಎರಡು ರಾಜ್ಯಗಳಲ್ಲಿ ಹೊಸದಾಗಿ ಖಾತೆ ತೆರೆಯಲಿದೆ. ನಾಶ ಯಾರು ಆಗ್ತಾರೆ ಗೊತ್ತಾಗುತ್ತೆ. ಕಾಂಗ್ರೆಸ್‌ ಒಂದು ರಾಜ್ಯವಾದರೂ ಗೆದ್ದು ತೋರಿಸಲಿ” ಎಂದು ಲೇವಡಿ ಮಾಡಿದರು.

ಮಂಗಳೂರು : ನೈಟ್‌ ಕರ್ಫ್ಯೂ ನಿಯಮ ಉಲ್ಲಂಘನೆ : 68 ವಾಹನಗಳ ಮೇಲೆ ಪ್ರಕರಣ ದಾಖಲು -Vishwanews24

”ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಬಣಗಳು ಕಾಂಗ್ರೆಸ್‌ನಲ್ಲಿದ್ದು ಈ ಎರಡು ಬಣಗಳು ತಮ್ಮ ವೈಯಕ್ತಿಕ ಪ್ರತಿಷ್ಠೆಗಾಗಿ ಜಗಳವಾಡಿ ತಮ್ಮ ಪಕ್ಷವನ್ನೇ ಅಧೋಗತಿಗೆ ತಂದಿದ್ದಾರೆ. ಕಾಂಗ್ರೆಸ್‌ ಪಕ್ಷ ಈಗ ಮೂರು ಭಾಗವಾಗಿದೆ” ಎಂದೂ ಹೇಳಿದರು.

”ಕಾಂಗ್ರೆಸ್‌ ಪಕ್ಷವೇ ಪ್ರಜಾಪ್ರಭುತ್ವ ಎಂಬ ಶಬ್ದಕ್ಕೆ ಹಾನಿ ಮಾಡಿದೆ” ಎಂದ ಅವರು, ”ಪಕ್ಷದಲ್ಲಿ ಪ್ರಭಾವಿಯಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ತಮ್ಮ ರಾಜಕೀಯ ಬೇಳೆ ಬೆಯ್ಯಿಸಿಕೊಳ್ಳಲು ಡಿಕೆಶಿ ಚುನಾವಣಾ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಇನ್ನು ಸತೀಶ ಅವರ ರಾಜಕೀಯ ಜೀವನ ಕೊನೆಗೊಳಿಸಲು ಡಿಕೆಶಿ ನಡೆಸಿದ ಷಡ್ಯಂತ್ರ ಇದು” ಎಂದು ದೂರಿದರು.

ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ : ಸಿಎಂ BSY -Vishwanews24

 

Vishwa News 24

Recent Posts

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

4 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

12 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

18 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

18 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

18 hours ago