Featured

ಐದು ರಾಜ್ಯಗಳಲ್ಲಿ ನಡೆಯುವ ಚುನಾವಣೆಯಲ್ಲಿ ನಾವು ಮೂರು ರಾಜ್ಯದಲ್ಲಿ ಗೆಲುವು ಸಾಧಿಸುತ್ತೇವೆ : ನಳಿನ್‌ ಕುಮಾರ್‌ -Vishwanews24

ಐದು ರಾಜ್ಯಗಳಲ್ಲಿ ನಡೆಯುವ ಚುನಾವಣೆಯಲ್ಲಿ ನಾವು ಮೂರು ರಾಜ್ಯದಲ್ಲಿ ಗೆಲುವು ಸಾಧಿಸುತ್ತೇವೆ : ನಳಿನ್‌ ಕುಮಾರ್‌ -Vishwanews24

ಎರಡು ರಾಜ್ಯಗಳಲ್ಲಿ ಬಿಜೆಪಿ ಹೊಸದಾಗಿ ಖಾತೆ ತೆರೆಯಲಿದೆ..

ಕಾಂಗ್ರೆಸ್‌ ಒಂದು ರಾಜ್ಯವಾದರೂ ಗೆದ್ದು ತೋರಿಸಲಿ..

ಗೋಕಾಕ, : ”ಐದು ರಾಜ್ಯಗಳಲ್ಲಿ ನಡೆಯುವ ಚುನಾವಣೆಯಲ್ಲಿ ನಾವು ಮೂರು ರಾಜ್ಯದಲ್ಲಿ ಗೆಲುವು ಸಾಧಿಸುತ್ತೇವೆ. ಆದರೆ ಕಾಂಗ್ರೆಸ್‌ ಒಂದು ರಾಜ್ಯವಾದರೂ ಗೆದ್ದು ತೋರಿಸಲಿ” ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣ್‌ದೀಪ್‌ ಸಿಂಗ್‌ ಸುರ್ಜೇವಾಲಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಸವಾಲೆಸೆದಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಪರವಾಗಿ ಪಟ್ಟಣದಲ್ಲಿ ಭಾನುವಾರ ರೋಡ್‌ ಶೋ ನಡೆಸಿ ಮಾತನಾಡಿದ ಸಂದರ್ಭ ನಳಿನ್‌ ಕುಮಾರ್‌ ಕಟೀಲ್‌ ಅವರು, ಉಪಚುನಾವಣೆಯ ಫಲಿತಾಂಶವು ಬಿಜೆಪಿ ಪತನಕ್ಕೆ ಮುನ್ನುಡಿಯಾಗುತ್ತೆ ಎಂಬ ರಣ್‌ದೀಪ್‌ ಸಿಂಗ್‌ ಸುರ್ಜೇವಾಲಾ ಅವರ ಹೇಳಿಗೆ ತಿರುಗೇಟು ನೀಡಿದರು.

”ಐದು ರಾಜ್ಯಗಳ ಪೈಕಿ ಬಿಜೆಪಿ ಮೂರು ರಾಜ್ಯದಲ್ಲಿ ಗೆಲುವು ಸಾಧಿಸಲಿದೆ. ಈ ಪೈಕಿ ಎರಡು ರಾಜ್ಯಗಳಲ್ಲಿ ಹೊಸದಾಗಿ ಖಾತೆ ತೆರೆಯಲಿದೆ. ನಾಶ ಯಾರು ಆಗ್ತಾರೆ ಗೊತ್ತಾಗುತ್ತೆ. ಕಾಂಗ್ರೆಸ್‌ ಒಂದು ರಾಜ್ಯವಾದರೂ ಗೆದ್ದು ತೋರಿಸಲಿ” ಎಂದು ಲೇವಡಿ ಮಾಡಿದರು.

ಮಂಗಳೂರು : ನೈಟ್‌ ಕರ್ಫ್ಯೂ ನಿಯಮ ಉಲ್ಲಂಘನೆ : 68 ವಾಹನಗಳ ಮೇಲೆ ಪ್ರಕರಣ ದಾಖಲು -Vishwanews24

”ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಬಣಗಳು ಕಾಂಗ್ರೆಸ್‌ನಲ್ಲಿದ್ದು ಈ ಎರಡು ಬಣಗಳು ತಮ್ಮ ವೈಯಕ್ತಿಕ ಪ್ರತಿಷ್ಠೆಗಾಗಿ ಜಗಳವಾಡಿ ತಮ್ಮ ಪಕ್ಷವನ್ನೇ ಅಧೋಗತಿಗೆ ತಂದಿದ್ದಾರೆ. ಕಾಂಗ್ರೆಸ್‌ ಪಕ್ಷ ಈಗ ಮೂರು ಭಾಗವಾಗಿದೆ” ಎಂದೂ ಹೇಳಿದರು.

”ಕಾಂಗ್ರೆಸ್‌ ಪಕ್ಷವೇ ಪ್ರಜಾಪ್ರಭುತ್ವ ಎಂಬ ಶಬ್ದಕ್ಕೆ ಹಾನಿ ಮಾಡಿದೆ” ಎಂದ ಅವರು, ”ಪಕ್ಷದಲ್ಲಿ ಪ್ರಭಾವಿಯಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ತಮ್ಮ ರಾಜಕೀಯ ಬೇಳೆ ಬೆಯ್ಯಿಸಿಕೊಳ್ಳಲು ಡಿಕೆಶಿ ಚುನಾವಣಾ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಇನ್ನು ಸತೀಶ ಅವರ ರಾಜಕೀಯ ಜೀವನ ಕೊನೆಗೊಳಿಸಲು ಡಿಕೆಶಿ ನಡೆಸಿದ ಷಡ್ಯಂತ್ರ ಇದು” ಎಂದು ದೂರಿದರು.

ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ : ಸಿಎಂ BSY -Vishwanews24

 

Vishwa News 24

Recent Posts

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

19 seconds ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

23 minutes ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

29 minutes ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

3 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago