ಗೋಕಾಕ, : ”ಐದು ರಾಜ್ಯಗಳಲ್ಲಿ ನಡೆಯುವ ಚುನಾವಣೆಯಲ್ಲಿ ನಾವು ಮೂರು ರಾಜ್ಯದಲ್ಲಿ ಗೆಲುವು ಸಾಧಿಸುತ್ತೇವೆ. ಆದರೆ ಕಾಂಗ್ರೆಸ್ ಒಂದು ರಾಜ್ಯವಾದರೂ ಗೆದ್ದು ತೋರಿಸಲಿ” ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸವಾಲೆಸೆದಿದ್ದಾರೆ.
ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಪರವಾಗಿ ಪಟ್ಟಣದಲ್ಲಿ ಭಾನುವಾರ ರೋಡ್ ಶೋ ನಡೆಸಿ ಮಾತನಾಡಿದ ಸಂದರ್ಭ ನಳಿನ್ ಕುಮಾರ್ ಕಟೀಲ್ ಅವರು, ಉಪಚುನಾವಣೆಯ ಫಲಿತಾಂಶವು ಬಿಜೆಪಿ ಪತನಕ್ಕೆ ಮುನ್ನುಡಿಯಾಗುತ್ತೆ ಎಂಬ ರಣ್ದೀಪ್ ಸಿಂಗ್ ಸುರ್ಜೇವಾಲಾ ಅವರ ಹೇಳಿಗೆ ತಿರುಗೇಟು ನೀಡಿದರು.
”ಐದು ರಾಜ್ಯಗಳ ಪೈಕಿ ಬಿಜೆಪಿ ಮೂರು ರಾಜ್ಯದಲ್ಲಿ ಗೆಲುವು ಸಾಧಿಸಲಿದೆ. ಈ ಪೈಕಿ ಎರಡು ರಾಜ್ಯಗಳಲ್ಲಿ ಹೊಸದಾಗಿ ಖಾತೆ ತೆರೆಯಲಿದೆ. ನಾಶ ಯಾರು ಆಗ್ತಾರೆ ಗೊತ್ತಾಗುತ್ತೆ. ಕಾಂಗ್ರೆಸ್ ಒಂದು ರಾಜ್ಯವಾದರೂ ಗೆದ್ದು ತೋರಿಸಲಿ” ಎಂದು ಲೇವಡಿ ಮಾಡಿದರು.
ಮಂಗಳೂರು : ನೈಟ್ ಕರ್ಫ್ಯೂ ನಿಯಮ ಉಲ್ಲಂಘನೆ : 68 ವಾಹನಗಳ ಮೇಲೆ ಪ್ರಕರಣ ದಾಖಲು -Vishwanews24
”ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬಣಗಳು ಕಾಂಗ್ರೆಸ್ನಲ್ಲಿದ್ದು ಈ ಎರಡು ಬಣಗಳು ತಮ್ಮ ವೈಯಕ್ತಿಕ ಪ್ರತಿಷ್ಠೆಗಾಗಿ ಜಗಳವಾಡಿ ತಮ್ಮ ಪಕ್ಷವನ್ನೇ ಅಧೋಗತಿಗೆ ತಂದಿದ್ದಾರೆ. ಕಾಂಗ್ರೆಸ್ ಪಕ್ಷ ಈಗ ಮೂರು ಭಾಗವಾಗಿದೆ” ಎಂದೂ ಹೇಳಿದರು.
”ಕಾಂಗ್ರೆಸ್ ಪಕ್ಷವೇ ಪ್ರಜಾಪ್ರಭುತ್ವ ಎಂಬ ಶಬ್ದಕ್ಕೆ ಹಾನಿ ಮಾಡಿದೆ” ಎಂದ ಅವರು, ”ಪಕ್ಷದಲ್ಲಿ ಪ್ರಭಾವಿಯಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ತಮ್ಮ ರಾಜಕೀಯ ಬೇಳೆ ಬೆಯ್ಯಿಸಿಕೊಳ್ಳಲು ಡಿಕೆಶಿ ಚುನಾವಣಾ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಇನ್ನು ಸತೀಶ ಅವರ ರಾಜಕೀಯ ಜೀವನ ಕೊನೆಗೊಳಿಸಲು ಡಿಕೆಶಿ ನಡೆಸಿದ ಷಡ್ಯಂತ್ರ ಇದು” ಎಂದು ದೂರಿದರು.
ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ : ಸಿಎಂ BSY -Vishwanews24
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…