ಹೊಸದಿಲ್ಲಿ: ಕಳೆದ ಐದು ವರ್ಷಗಳ ನರೇಂದ್ರ ಮೋದಿ ನೇತೃತ್ವದ ಆಡಳಿತ ದೇಶದ ಯುವಕರು, ರೈತರು, ವ್ಯಾಪಾರಿಗಳು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳಿಗೆ ಅತಿ ಆಘಾತಕಾರಿಯಾಗಿತ್ತು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಸ್ವಾತಂತ್ರ್ಯ ನಂತರ ದೇಶದಲ್ಲಿ ನಡೆದ ಅತಿದೊಡ್ಡ ಹಗರಣ ಎಂದರೆ ನೋಟು ಅಮಾನ್ಯೀಕರಣ. ಪಾಕಿಸ್ತಾನದ ಕುರಿತು ಮೋದಿ ಸರಕಾರ ಅನುಸರಿಸಿದ ನೀತಿ ಕೂಡ ಅಜಾಗರೂಕತೆಯಿಂದ ಕೂಡಿತ್ತು. ಪಠಾಣ್ಕೋಟ್ ವಾಯುನೆಲೆ ಮೇಲಿನ ದಾಳಿ ಮೋದಿ ಸರಕಾರದ ಭದ್ರತಾ ವೈಫಲ್ಯದ ಪರಿಣಾಮವಲ್ಲವೇ ಎಂದು ಸಿಂಗ್ ಪ್ರಶ್ನಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಕರಣಗಳು ಶೇ. 176ರಷ್ಟು ಹೆಚ್ಚಿದೆ. ಕದನವಿರಾಮ ಉಲ್ಲಂಘನೆ ಕೂಡ ಏರಿಕೆಯಾಗಿದೆ. ಎಲ್ಲರನ್ನೂ ಒಟ್ಟಾಗಿ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಬದಲು ಪ್ರಧಾನಿ ಮೋದಿಗೆ ಕೇವಲ ರಾಜಕೀಯ ಅಸ್ತಿತ್ವ ಮಾತ್ರ ಮುಖ್ಯವಾಗಿದೆ. ಹಾಗಾಗಿ ಕೋಮುಸೌಹಾರ್ದತೆ ಕದಡುತ್ತಿದ್ದಾರೆ ಎಂದು ಸಿಂಗ್ ಕಿಡಿಕಾರಿದ್ದಾರೆ.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…