ದಾವಣಗೆರೆ: ಐದು ವರ್ಷದ ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ತಾಯಿ ಕೆರೆಗೆ ಹಾರಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಕವಿತಾ (27) ಹಾಗೂ ನಿಹಾರಿಕಾ (05) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಮೃತ ಕವಿತಾ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದ ನಿವಾಸಿ ಮಂಜುನಾಥ್ ಪತ್ನಿ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ಇರುವ ಐತಿಹಾಸಿಕ ಪ್ರವಾಸಿ ತಾಣ ಸೂಳೆಕೆರೆಯಲ್ಲಿ ಈ ಘಟನೆ ನಡೆದಿದೆ.
ಕಳೆದ ಶುಕ್ರವಾರ ಮಗಳು ನಿಹಾರಿಕಾಳೊಂದಿಗೆ ಕವಿತಾ ಕಾಣೆಯಾಗಿದ್ದಳು. ಈ ಬಗ್ಗೆ ಪತಿ ಮಂಜುನಾಥ್ ಪೊಲೀಸರಿಗೆ ದೂರು ಕೊಟ್ಟಿದ್ದರು. ಇಂದು ಸೂಳೆಕೆರೆಯಲ್ಲಿ ತಾಯಿ-ಮಗಳ ಶವ ಪತ್ತೆಯಾಗಿದೆ. ಸೂಳೆಕೆರೆಗೆ ಹಾರುವ ಮುನ್ನ ಮಗಳನ್ನ ವೇಲ್ ನಿಂದ ಕಟ್ಟಿಕೊಂಡು ಕವಿತಾ ಕೆರೆಗೆ ಹಾರಿದ್ದಾರೆ.
ಮೂಲತಃ ಎರೇಹಳ್ಳಿಯ ನಿವಾಸಿಯಾದ ಕವಿತಾ ಅವರು ಆರು ವರ್ಷದ ಹಿಂದೆ ಹೊನ್ನೆಬಾಗಿ ಮಂಜುನಾಥ್ನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಐದು ವರ್ಷದ ನಿಹಾರಿಕಾ ಎಂಬ ಓರ್ವ ಮಗಳಿದ್ದಳು. ಬಳಿಕ ವರದಕ್ಷಿಣೆ ಕಿರುಕಳ ಆರೋಪ ಕೇಳಿಬಂದಿತ್ತು.
ಕಳೆದ ಕೆಲ ವರ್ಷಗಳಿಂದ ಪತಿ ಹಾಗೂ ಅವರ ಮನೆಯವರು ನಿರಂತರ ವರದಕ್ಷಿಣೆ ಕಿರುಕಳ ನೀಡುತ್ತಿದ್ದರು. ಪತಿ ಹಾಗೂ ಪತಿ ಮನೆಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕವಿತಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಕವಿತಾಳ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…