Featured

ಐದು ವರ್ಷ ನೀವು ಅಧಿಕಾರದಲ್ಲಿದ್ದಾಗ ಸಂಘವನ್ನು ನಿಷೇಧ ಮಾಡಲು ಧೈರ್ಯ ಇರಲಿಲ್ಲವೇ : ಸಿದ್ದುಗೆ ಸಿ.ಟಿ.ರವಿ -Vishwanews24

ಐದು ವರ್ಷ ನೀವು ಅಧಿಕಾರದಲ್ಲಿದ್ದಾಗ ಸಂಘವನ್ನು ನಿಷೇಧ ಮಾಡಲು ಧೈರ್ಯ ಇರಲಿಲ್ಲವೇ : ಸಿದ್ದುಗೆ ಸಿ.ಟಿ.ರವಿ -Vishwanews24

ಚಿಕ್ಕಮಗಳೂರು: ಸಂಘ ಪರಿವಾರದವರು ಕೊಲೆ ಆರೋಪಿಗಳು ಎಂದು ಹೇಳಿರುವ ಸಿದ್ದರಾಮಯ್ಯ ಅವರ ಟ್ವೀಟ್‌ಗೆ ತಿರುಗೇಟು ನೀಡಿರುವ ಪ್ರವಾಸೋಧ್ಯಮ ಸಚಿವ ಸಿ.ಟಿ.ರವಿ ಅವರು, ಐದು ವರ್ಷ ನೀವು ಅಧಿಕಾರದಲ್ಲಿದ್ದ ಸಂದರ್ಭ ಸಂಘವನ್ನು ನಿಷೇಧ ಮಾಡಲು ನಿಮಗೆ ಅಂದು ಧೈರ್ಯ ಇರಲಿಲ್ಲವೇ ಎಂದು ಕೇಳಿದ್ದಾರೆ.

ನಗರದ ತಮ್ಮ ಮನೆಯಲ್ಲಿ ಮಾತನಾಡಿರುವ ಅವರು, ನಾನು ಸಂಘದ ಸ್ವಯಂ ಸೇವಕನಾಗಿದ್ದು, ಶಾಸಕ, ಸಚಿವನಾಗಿದ್ದೇನೆ. ಹಾಗೆಯೇ ನರೇಂದ್ರ ಮೋದಿ ಅವರೂ ಕೂಡಾ ಪ್ರಧಾನ ಮಂತ್ರಿಯಾಗಿರುವುದು. ದೇಶಭಕ್ತಿ ಹಾಗೂ ಸಂಸ್ಕಾರವನ್ನು ಸಂಘ ಕಲಿಸಿಕೊಡುತ್ತದೆ. ಒಂದು ವೇಳೆ ಟೀಕೆ ಮಾಡುವವರ ಹತ್ಯೆ ಮಾಡುವಂತೆ ಹೇಳಿಕೊಡುತ್ತಿದ್ದರೆ ಭೂಮಿ ಮೇಲೆ ಯಾರು ಜೀವಿಸುತ್ತಿರಲಿಲ್ಲ ಎಂದಿದ್ದಾರೆ.

ಗಾಂಧಿ ಹತ್ಯೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ ಮುಖಂಡರು ಗಾಂಧಿ ಹತ್ಯೆಗೆ ಸಂಘವೇ ಕಾರಣ ಎಂದಿದ್ದರು. ಆದರೆ, ಆ ವೇಳೆ ಕಪೂರ್‌ ಕಮಿಷನ್‌‌‌ ಗಾಂಧಿ ಹತ್ಯೆಯಾಗಿರುವುದಕ್ಕೂ ಹಾಗೂ ಆರ್‌ಎಸ್‌‌ಎಸ್‌ಗೆ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂದು ಹೇಳಿದ್ದರು. ಪ್ರಸ್ತುತ ನೀವು ಇದೇ ರೀತಿಯಾದ ಆರೋಪವನ್ನು ಮಾಡುತ್ತಿದ್ದೀರಿ. ಮೊದಲು ಇಂತಹ ಸುಳ್ಳು ಆರೋಪ ಮಾಡುವುದನ್ನು ಬಿಟ್ಟುಬಿಡಿ ಎಂದು ಹೇಳಿದ್ದಾರೆ.

ಇನ್ನು ಟ್ವೀಟ್‌ ಸಂಬಂಧಿಸಿದಂತೆ ಮಾತನಾಡಿದ ಅವರು, ನಿಮ್ಮ ಟ್ವಿಟ್ಟರ್‌ ಖಾತೆಯನ್ನು ನಿರ್ವಹಿಸುವವನಿಗೆ ವಾಸ್ತವಿಕದ ಬಗ್ಗೆ ಟ್ವೀಟ್‌ ಮಾಡಲು ತಿಳಿಸಿ. ಇಲ್ಲವಾದಲ್ಲಿ ನಿಮಗೆ ಕೆಟ್ಟ ಹೆಸರು ಬರುತ್ತದೆ. ಸಂಘ ವಿರೋಧಿಗಳಿಗೆ ನಿಮ್ಮ ಟ್ವಿಟ್ಟರ್‌ ಖಾತೆಯನ್ನು ನೀಡಿ ಕೆಟ್ಟವನೆಂದು ಅನ್ನಿಸಿಕೊಳ್ಳಬೇಡಿ ಎಂದು ಸಲಹೆ ನೀಡಿದರು.

ನೀವು ಸಂಘವನ್ನು ಟೀಕಿಸುವ ಮುನ್ನ ಸಂಘ ಮಾಡಿರುವ ಕೆಲಸಗಳ ಬಗ್ಗೆ ತಿಳಿದುಕೊಳ್ಳಿ. ನಿಮಗೆ ಏಕಲವ್ಯ ವಿದ್ಯಾಲಯ, ಸರಸ್ವತಿ ಶಿಶು ಮಂದಿರ ಎನ್ನುವ ಬಗ್ಗೆ ತಿಳಿದಿದೆಯೇ. ಈ ಎರಡು ವಿದ್ಯಾಲಯಗಳಲ್ಲಿ ವಿದ್ಯಾಭ್ಯಾಸ ಮಾಡಿರುವವರು ಭಯೋತ್ಪಾದಕರಾಗಿಲ್ಲ. ಬದಲಾಗಿ ಅವರು ದೇಶಭಕ್ತರಾಗಿದ್ದಾರೆ. ಅಲ್ಪಸ್ಪಲ್ಪ ತಿಳುವಳಿಕೆ ಹೊಂದಿದವರು ಸಮಾಜವನ್ನು ಒಡೆಯುವ ಕಾರ್ಯಕ್ಕೆ ಮುಂದಾಗುತ್ತಾರೆ ಎಂದಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

16 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

16 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

17 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

17 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

17 hours ago