Featured

ಐದು ವರ್ಷ ನೀವು ಅಧಿಕಾರದಲ್ಲಿದ್ದಾಗ ಸಂಘವನ್ನು ನಿಷೇಧ ಮಾಡಲು ಧೈರ್ಯ ಇರಲಿಲ್ಲವೇ : ಸಿದ್ದುಗೆ ಸಿ.ಟಿ.ರವಿ -Vishwanews24

ಐದು ವರ್ಷ ನೀವು ಅಧಿಕಾರದಲ್ಲಿದ್ದಾಗ ಸಂಘವನ್ನು ನಿಷೇಧ ಮಾಡಲು ಧೈರ್ಯ ಇರಲಿಲ್ಲವೇ : ಸಿದ್ದುಗೆ ಸಿ.ಟಿ.ರವಿ -Vishwanews24

ಚಿಕ್ಕಮಗಳೂರು: ಸಂಘ ಪರಿವಾರದವರು ಕೊಲೆ ಆರೋಪಿಗಳು ಎಂದು ಹೇಳಿರುವ ಸಿದ್ದರಾಮಯ್ಯ ಅವರ ಟ್ವೀಟ್‌ಗೆ ತಿರುಗೇಟು ನೀಡಿರುವ ಪ್ರವಾಸೋಧ್ಯಮ ಸಚಿವ ಸಿ.ಟಿ.ರವಿ ಅವರು, ಐದು ವರ್ಷ ನೀವು ಅಧಿಕಾರದಲ್ಲಿದ್ದ ಸಂದರ್ಭ ಸಂಘವನ್ನು ನಿಷೇಧ ಮಾಡಲು ನಿಮಗೆ ಅಂದು ಧೈರ್ಯ ಇರಲಿಲ್ಲವೇ ಎಂದು ಕೇಳಿದ್ದಾರೆ.

ನಗರದ ತಮ್ಮ ಮನೆಯಲ್ಲಿ ಮಾತನಾಡಿರುವ ಅವರು, ನಾನು ಸಂಘದ ಸ್ವಯಂ ಸೇವಕನಾಗಿದ್ದು, ಶಾಸಕ, ಸಚಿವನಾಗಿದ್ದೇನೆ. ಹಾಗೆಯೇ ನರೇಂದ್ರ ಮೋದಿ ಅವರೂ ಕೂಡಾ ಪ್ರಧಾನ ಮಂತ್ರಿಯಾಗಿರುವುದು. ದೇಶಭಕ್ತಿ ಹಾಗೂ ಸಂಸ್ಕಾರವನ್ನು ಸಂಘ ಕಲಿಸಿಕೊಡುತ್ತದೆ. ಒಂದು ವೇಳೆ ಟೀಕೆ ಮಾಡುವವರ ಹತ್ಯೆ ಮಾಡುವಂತೆ ಹೇಳಿಕೊಡುತ್ತಿದ್ದರೆ ಭೂಮಿ ಮೇಲೆ ಯಾರು ಜೀವಿಸುತ್ತಿರಲಿಲ್ಲ ಎಂದಿದ್ದಾರೆ.

ಗಾಂಧಿ ಹತ್ಯೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ ಮುಖಂಡರು ಗಾಂಧಿ ಹತ್ಯೆಗೆ ಸಂಘವೇ ಕಾರಣ ಎಂದಿದ್ದರು. ಆದರೆ, ಆ ವೇಳೆ ಕಪೂರ್‌ ಕಮಿಷನ್‌‌‌ ಗಾಂಧಿ ಹತ್ಯೆಯಾಗಿರುವುದಕ್ಕೂ ಹಾಗೂ ಆರ್‌ಎಸ್‌‌ಎಸ್‌ಗೆ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂದು ಹೇಳಿದ್ದರು. ಪ್ರಸ್ತುತ ನೀವು ಇದೇ ರೀತಿಯಾದ ಆರೋಪವನ್ನು ಮಾಡುತ್ತಿದ್ದೀರಿ. ಮೊದಲು ಇಂತಹ ಸುಳ್ಳು ಆರೋಪ ಮಾಡುವುದನ್ನು ಬಿಟ್ಟುಬಿಡಿ ಎಂದು ಹೇಳಿದ್ದಾರೆ.

ಇನ್ನು ಟ್ವೀಟ್‌ ಸಂಬಂಧಿಸಿದಂತೆ ಮಾತನಾಡಿದ ಅವರು, ನಿಮ್ಮ ಟ್ವಿಟ್ಟರ್‌ ಖಾತೆಯನ್ನು ನಿರ್ವಹಿಸುವವನಿಗೆ ವಾಸ್ತವಿಕದ ಬಗ್ಗೆ ಟ್ವೀಟ್‌ ಮಾಡಲು ತಿಳಿಸಿ. ಇಲ್ಲವಾದಲ್ಲಿ ನಿಮಗೆ ಕೆಟ್ಟ ಹೆಸರು ಬರುತ್ತದೆ. ಸಂಘ ವಿರೋಧಿಗಳಿಗೆ ನಿಮ್ಮ ಟ್ವಿಟ್ಟರ್‌ ಖಾತೆಯನ್ನು ನೀಡಿ ಕೆಟ್ಟವನೆಂದು ಅನ್ನಿಸಿಕೊಳ್ಳಬೇಡಿ ಎಂದು ಸಲಹೆ ನೀಡಿದರು.

ನೀವು ಸಂಘವನ್ನು ಟೀಕಿಸುವ ಮುನ್ನ ಸಂಘ ಮಾಡಿರುವ ಕೆಲಸಗಳ ಬಗ್ಗೆ ತಿಳಿದುಕೊಳ್ಳಿ. ನಿಮಗೆ ಏಕಲವ್ಯ ವಿದ್ಯಾಲಯ, ಸರಸ್ವತಿ ಶಿಶು ಮಂದಿರ ಎನ್ನುವ ಬಗ್ಗೆ ತಿಳಿದಿದೆಯೇ. ಈ ಎರಡು ವಿದ್ಯಾಲಯಗಳಲ್ಲಿ ವಿದ್ಯಾಭ್ಯಾಸ ಮಾಡಿರುವವರು ಭಯೋತ್ಪಾದಕರಾಗಿಲ್ಲ. ಬದಲಾಗಿ ಅವರು ದೇಶಭಕ್ತರಾಗಿದ್ದಾರೆ. ಅಲ್ಪಸ್ಪಲ್ಪ ತಿಳುವಳಿಕೆ ಹೊಂದಿದವರು ಸಮಾಜವನ್ನು ಒಡೆಯುವ ಕಾರ್ಯಕ್ಕೆ ಮುಂದಾಗುತ್ತಾರೆ ಎಂದಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago