ಬೆಂಗಳೂರು: ಮಿಸ್ಟರ್ ಐಪಿಎಲ್ ಎಂದೇ ಖ್ಯಾತಿ ಗಿಟ್ಟಿಸಿದ್ದ ಟೀಮ್ ಇಂಡಿಯಾ ಮಾಜಿ ಆಲ್ರೌಂಡರ್ ಸುರೇಶ್ ರೈನಾ, ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ ಸೇರಿದಂತೆ ಎಲ್ಲಾ ಮಾದರಿಯ ದೇಶಿ ಕ್ರಿಕೆಟ್ಗೆ ಮಂಗಳವಾರ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ.
ಕೆಲ ದಿನಗಳಿಂದ ನೆಟ್ಸ್ನಲ್ಲಿ ಅಭ್ಯಾಸ ನಿರತರಾಗಿ ಕಮ್ಬ್ಯಾಕ್ ಮಾಡುವ ಸುಳಿವು ನೀಡಿದ್ದ ರೈನಾ, ಐಪಿಎಲ್ 2023 ಟೂರ್ನಿಯಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳುತ್ತಾರೆ ಎಂದೇ ಅಭಿಮಾನಿಗಳು ಎದುರು ನೋಡುತ್ತಿದ್ದರು. ಆದರೆ, ಎಲ್ಲಾ ಮಾದರಿಯ ಕ್ರಿಕೆಟ್ಗೆ ರೈನಾ ವಿದಾಯ ಹೇಳಿರುವುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.
2020ರಲ್ಲಿ ಎಂ.ಎಸ್ ಧೋನಿ ಆಗಸ್ಟ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ದಿನವೇ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ಗೆ ಅಂತ್ಯ ಹಾಡಿದ್ದರು. ದೈನಿಕ್ ಜಾಗರಣ್ ಮಾಡಿರುವ ವರದಿ ಪ್ರಕಾರ ರೈನಾ, ಮುಂಬರುವ ಐಪಿಎಲ್ನಲ್ಲೂ ಆಡುವುದಿಲ್ಲ. ಐಪಿಎಲ್ 2022 ಟೂರ್ನಿ ಸಲುವಾಗಿ ನಡೆದ ಮೆಗಾ ಆಕ್ಷನ್ಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸುರೇಶ್ ರೈನಾ ಅವರನ್ನು ಬಿಡುಗಡೆ ಮಾಡಿತ್ತು. ಆದರೆ, ಹರಾಜಿನಲ್ಲಿ ಯಾವುದೇ ತಂಡ ರೈನಾ ಅವರನ್ನು ಖರೀದಿಸಲು ಮುಂದಾಗಿರಲಿಲ್ಲ. ಇನ್ನು ಕೊರೊನಾ ವೈರಸ್ ಕಾರಣ ರೈನಾ ಐಪಿಎಲ್ 2021 ಟೂರ್ನಿಯಿಂದ ಹೊರಗುಳಿದಿದ್ದರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪುತ್ತೂರು ಮತ್ತು ಸುಳ್ಯದ 32 ಕಡೆ NIA ದಾಳಿ – Vishwanews24
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…