ಬೆಂಗಳೂರು: ದಕ್ಷ, ಪ್ರಮಾಣಿಕ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನ ಬಗ್ಗೆ ಹಲವಾರು ಮಂದಿ ಅನುಮಾನ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ, ಮಧುಕರ ಶೆಟ್ಟಿ ಅವರ ಸಾವಿನ ಬಗ್ಗೆ ಇರುವ ಅನುಮಾನ ನಿವಾರಿಸಲು ರಾಜ್ಯ ಸರಕಾರ ಪರಿಣಿತ ವೈದ್ಯರ ಸಮಿತಿ ರಚಿಸಿ ತನಿಖೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲು ತಿಳಿಸಿದೆ.
ಈ ತನಿಖಾ ಸಮಿತಿಯಲ್ಲಿ ಪ್ರಮುಖ ವೈದ್ಯರ ತಂಡವಿದ್ದು ನಾರಾಯಣ ಹೃದಯಾಲಯದ ಡಾ. ದೇವಿಪ್ರಸಾದ್ ಶೆಟ್ಟಿ ಅವರನ್ನು ಅಧ್ಯಕ್ಷರನ್ನಾಗಿಸಿದ್ದು, ಉಳಿದಂತೆ ಸದಸ್ಯರನ್ನಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು, ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಕಾರ್ಡಿಯೋಥೊರಾಸಿಕ್ ಸರ್ಜರಿ ವಿಭಾಗದ ಡಾ. ಸೀತಾರಾಮ್ ಭಟ್, ನಿಮ್ಹಾನ್ಸ್ನ ವೈರಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ವಿ. ರವಿ, ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯ ಎದೆರೋಗ ವಿಭಾಗದ ಡಾ. ನಾಗರಾಜ ಅವರನ್ನು ನೇಮಕ ಮಾಡಲಾಗಿದೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರನ್ನು ಸಂಚಾಲಕರನ್ನಾಗಿ ನೇಮಿಸಿದ್ದು, ಎರಡು ವಾರಗಳಲ್ಲಿ ವರದಿ ನೀಡುವಂತೆ ಆದೇಶದಲ್ಲಿ ತಿಳಿಸಿದೆ.
ಹೈದ್ರಾಬಾದ್ನ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಮಧುಕರ್ ಶೆಟ್ಟಿ ಅವರಿಗೆ ದಿಢೀರ್ ಕಾಣಿಸಿಕೊಂಡ ಅನಾರೋಗ್ಯದಿಂದ ಹೈದ್ರಾಬಾದಿನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಡಿ.25ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ಭ್ರಷ್ಟರ ಪಾಲಿಗೆ ಸಿಂಹಸ್ವಪ್ನ ಆಗಿದ್ದ ಖಡಕ್ ಅಧಿಕಾರಿ ಸಾವಿನ ಸುತ್ತ ಹಲವಾರು ಅನುಮಾನ ಹುಟ್ಟುಹಾಕಿಕೊಂಡಿತ್ತು.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…