Featured

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನ ರಹಸ್ಯ ತನಿಖೆಗೆ ಪರಿಣಿತರ ಸಮಿತಿ ರಚನೆ -Vishwanews24

ಬೆಂಗಳೂರು: ದಕ್ಷ, ಪ್ರಮಾಣಿಕ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನ ಬಗ್ಗೆ ಹಲವಾರು ಮಂದಿ ಅನುಮಾನ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ, ಮಧುಕರ ಶೆಟ್ಟಿ ಅವರ ಸಾವಿನ ಬಗ್ಗೆ ಇರುವ ಅನುಮಾನ ನಿವಾರಿಸಲು ರಾಜ್ಯ ಸರಕಾರ ಪರಿಣಿತ ವೈದ್ಯರ ಸಮಿತಿ ರಚಿಸಿ ತನಿಖೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲು ತಿಳಿಸಿದೆ.

ಈ ತನಿಖಾ ಸಮಿತಿಯಲ್ಲಿ ಪ್ರಮುಖ ವೈದ್ಯರ ತಂಡವಿದ್ದು ನಾರಾಯಣ ಹೃದಯಾಲಯದ ಡಾ. ದೇವಿಪ್ರಸಾದ್‌ ಶೆಟ್ಟಿ ಅವರನ್ನು ಅಧ್ಯಕ್ಷರನ್ನಾಗಿಸಿದ್ದು, ಉಳಿದಂತೆ ಸದಸ್ಯರನ್ನಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು, ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಕಾರ್ಡಿಯೋಥೊರಾಸಿಕ್‌ ಸರ್ಜರಿ ವಿಭಾಗದ ಡಾ. ಸೀತಾರಾಮ್‌ ಭಟ್, ನಿಮ್ಹಾನ್ಸ್‌ನ ವೈರಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ವಿ. ರವಿ, ರಾಜೀವ್‌ ಗಾಂಧಿ ಎದೆರೋಗಗಳ ಸಂಸ್ಥೆಯ ಎದೆರೋಗ ವಿಭಾಗದ ಡಾ. ನಾಗರಾಜ ಅವರನ್ನು ನೇಮಕ ಮಾಡಲಾಗಿದೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರನ್ನು ಸಂಚಾಲಕರನ್ನಾಗಿ ನೇಮಿಸಿದ್ದು, ಎರಡು ವಾರಗಳಲ್ಲಿ ವರದಿ ನೀಡುವಂತೆ ಆದೇಶದಲ್ಲಿ ತಿಳಿಸಿದೆ.

ಹೈದ್ರಾಬಾದ್‌ನ ಸರ್ದಾರ್‌ ವಲ್ಲಭಭಾಯ್‌ ಪಟೇಲ್ ರಾಷ್ಟ್ರೀಯ ಪೊಲೀಸ್‌ ಅಕಾಡೆಮಿಯ ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಮಧುಕರ್‌ ಶೆಟ್ಟಿ ಅವರಿಗೆ ದಿಢೀರ್ ಕಾಣಿಸಿಕೊಂಡ ಅನಾರೋಗ್ಯದಿಂದ ಹೈದ್ರಾಬಾದಿನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಡಿ.25ರಂದು ಚಿಕಿತ್ಸೆ ಫ‌ಲಿಸದೆ ಸಾವನ್ನಪ್ಪಿದ್ದರು. ಭ್ರಷ್ಟರ ಪಾಲಿಗೆ ಸಿಂಹಸ್ವಪ್ನ ಆಗಿದ್ದ ಖಡಕ್​​ ಅಧಿಕಾರಿ ಸಾವಿನ ಸುತ್ತ ಹಲವಾರು ಅನುಮಾನ ಹುಟ್ಟುಹಾಕಿಕೊಂಡಿತ್ತು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

4 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

5 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

5 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

5 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

5 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

5 hours ago