ಬೆಂಗಳೂರು: ದಕ್ಷ, ಪ್ರಮಾಣಿಕ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನ ಬಗ್ಗೆ ಹಲವಾರು ಮಂದಿ ಅನುಮಾನ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ, ಮಧುಕರ ಶೆಟ್ಟಿ ಅವರ ಸಾವಿನ ಬಗ್ಗೆ ಇರುವ ಅನುಮಾನ ನಿವಾರಿಸಲು ರಾಜ್ಯ ಸರಕಾರ ಪರಿಣಿತ ವೈದ್ಯರ ಸಮಿತಿ ರಚಿಸಿ ತನಿಖೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲು ತಿಳಿಸಿದೆ.
ಈ ತನಿಖಾ ಸಮಿತಿಯಲ್ಲಿ ಪ್ರಮುಖ ವೈದ್ಯರ ತಂಡವಿದ್ದು ನಾರಾಯಣ ಹೃದಯಾಲಯದ ಡಾ. ದೇವಿಪ್ರಸಾದ್ ಶೆಟ್ಟಿ ಅವರನ್ನು ಅಧ್ಯಕ್ಷರನ್ನಾಗಿಸಿದ್ದು, ಉಳಿದಂತೆ ಸದಸ್ಯರನ್ನಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು, ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಕಾರ್ಡಿಯೋಥೊರಾಸಿಕ್ ಸರ್ಜರಿ ವಿಭಾಗದ ಡಾ. ಸೀತಾರಾಮ್ ಭಟ್, ನಿಮ್ಹಾನ್ಸ್ನ ವೈರಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ವಿ. ರವಿ, ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯ ಎದೆರೋಗ ವಿಭಾಗದ ಡಾ. ನಾಗರಾಜ ಅವರನ್ನು ನೇಮಕ ಮಾಡಲಾಗಿದೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರನ್ನು ಸಂಚಾಲಕರನ್ನಾಗಿ ನೇಮಿಸಿದ್ದು, ಎರಡು ವಾರಗಳಲ್ಲಿ ವರದಿ ನೀಡುವಂತೆ ಆದೇಶದಲ್ಲಿ ತಿಳಿಸಿದೆ.
ಹೈದ್ರಾಬಾದ್ನ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಮಧುಕರ್ ಶೆಟ್ಟಿ ಅವರಿಗೆ ದಿಢೀರ್ ಕಾಣಿಸಿಕೊಂಡ ಅನಾರೋಗ್ಯದಿಂದ ಹೈದ್ರಾಬಾದಿನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಡಿ.25ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು. ಭ್ರಷ್ಟರ ಪಾಲಿಗೆ ಸಿಂಹಸ್ವಪ್ನ ಆಗಿದ್ದ ಖಡಕ್ ಅಧಿಕಾರಿ ಸಾವಿನ ಸುತ್ತ ಹಲವಾರು ಅನುಮಾನ ಹುಟ್ಟುಹಾಕಿಕೊಂಡಿತ್ತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…