Featured

ಐಬಿಎಂ ಹೆಸರಿನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನಕಲಿ ಜಾಬ್ ಆಫರ್ ಪತ್ರ ಕೊಟ್ಟು 40 ಮಂದಿಗೆ ಮೋಸ – Vishwanews24

ಐಬಿಎಂ ಹೆಸರಿನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನಕಲಿ ಜಾಬ್ ಆಫರ್ ಪತ್ರ ಕೊಟ್ಟು 40 ಮಂದಿಗೆ ಮೋಸ – Vishwanews24

ಬೆಂಗಳೂರು : ಐಬಿಎಂ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 40 ಕ್ಕೂ ಹೆಚ್ಚು ಮಂದಿಯಿಂದ ಹಣ ಪಡೆದು ವಂಚಿಸಿರುವುದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಐಬಿಎಂ ಕಂಪೆನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮೊಸ ಮಾಡಿದ್ದ ಮಹಾರಾಷ್ಟ್ರ ಮೂಲದ ಗಂಗಾರಾಮ್ ಎಂಬಾತನನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮಾನ್ಯತಾ ಟೆಕ್ ಪಾರ್ಕ್ ನಲ್ಲಿರುವ ಐಬಿಎಂನಲ್ಲಿ ಕೆಲಸ ಖಾಲಿಯಿದೆ ಎಂದು ಸಂಜೀವ್ ಕುಮಾರ್ ಒಎಲ್‌ಎಕ್ಸ್ ನಲ್ಲಿ ಜಾಹೀರಾತು ಪ್ರಕಟಿಸಿದ್ದ. ಜಾಬ್ ಆಫರ್ ನೋಡಿ ಸಂಪರ್ಕಿಸಿದರಿಂದ ತಲಾ 50 ಸಾವಿರ ರೂ. ನಂತೆ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದ. ಆ ಬಳಿಕ ನಕಲಿ ಉದ್ಯೋಗ ಪತ್ರ ನೀಡಿ ಐಬಿಎಂ ಎಚ್‌ಆರ್ ಪ್ರದೀಪ್ ಎಂಬುವರನ್ನು ಭೇಟಿ ಮಾಡುವಂತೆ ಸೂಚಿಸಿದ್ದ. ಇದನ್ನು ನಂಬಿದ್ದ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಸಂಜೀವ್ ನನ್ನು ನಂಬಿ ಹಣ ನೀಡಿ ನಕಲಿ ಉದ್ಯೋಗ ಪತ್ರ ಪಡೆದಿದ್ದರು.

ಈ ಜಾಬ್ ಆಫರ್ ಪತ್ರ ಪಡೆದು ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಐಬಿಎಂ ಸಂಪರ್ಕಿಸಿದಾಗ ಪ್ರದೀಪ್ ಹೆಸರಿನ ಎಚ್‌ ಆರ್ ಇಲ್ಲ ಎಂಬ ಸಂಗತಿ ಗೊತ್ತಾಗಿದೆ. ಕೊಟ್ಟಿರುವುದು ಖೊಟ್ಟಿ ಉದ್ಯೋಗ ಪತ್ರ ಎಂಬುದು ಗೊತ್ತಾಗಿದೆ. ವಂಚನೆಗೆ ಒಳಗಾಗಿದ್ದ ಅಭಿಜಿತ್ ರಾಯ್ ಎಂಬಾತ ಸಂಪಿಗೆಹಳ್ಳಿ ಪೊಲೀಸರಿಗೆ ದೂರು ನೀಡಿದ್ದ.

ದೂರು ಆಧರಿಸಿ ಮಹಾರಾಷ್ಟ್ರ ಮೂಲದ ಸಂಜೀವ್ ಗಂಗಾರಾಮ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಇದನ್ನೇ ಕಸುಬು ಮಾಡಿಕೊಂಡಿದ್ದ. ಅಲ್ಲದೇ ಸುಮಾರು ಎಂಟು ಬ್ಯಾಂಕ್ ಖಾತೆ ಹೊಂದಿದ್ದು, ಅದಕ್ಕೆ ಹಣ ವರ್ಗಾವಣೆ ಮಾಡಿಸಿಕೊಂಡಿದ್ದ. ಇದೀಗ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದು ಈ ಹಿಂದೆ ಇದೇ ರೀತಿ ವಂಚನೆ ಮಾಡಿರುವ ಸಂಗತಿ ತನಿಖೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago