ಮಂಗಳೂರು: ನಗರದಲ್ಲಿ ನಡೆಸಿದ ಪ್ರತಿಭಟನೆಯ ವೇಳೆ ರಾಜ್ಯಪಾಲರನ್ನು ಬಾಂಗ್ಲಾ ದೇಶದ ಮಾದರಿಯಲ್ಲಿ ರಾಜ್ಯದಿಂದ ಓಡಿಸುತ್ತೇವೆ ಎಂಬ ಹೇಳಿಕೆ ನೀಡಿ, ಅರಾಜಕತೆ ಸೃಷ್ಟಿಸಲು ಯತ್ನಿಸಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಒತ್ತಾಯಿಸಿದೆ.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಜೋಯಲ್ ಮೆಂಡೋನ್ಸಾ, ‘ನಾಲಿಗೆಯ ಮೇಲೆ ಹಿಡಿತ ಇಲ್ಲದೆ ಮಾತನಾಡುವ ಐವನ್ ಅವರನ್ನು ವಿಧಾನ ಪರಿಷತ್ ಸ್ಥಾನದಿಂದ ಬಿಡುಗಡೆಗೊಳಿಸಬೇಕು. ಅರಾಜಕತೆ ಸೃಷ್ಟಿಸುವ ಕಾಂಗ್ರೆಸ್ ಯತ್ನ ಐವನ್ ಮೂಲಕ ಬಯಲಾಗಿದೆ. ಅವರನ್ನು ಬಂಧಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು’ ಎಂದರು.
ಕಾಂಗ್ರೆಸ್ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆದರೆ, ಇದಕ್ಕೆ ಪ್ರಚೋದನೆ ನೀಡಿದ ಐವನ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸದೆ ಪೊಲೀಸ್ ಇಲಾಖೆ ತಾರತಮ್ಯ ತೋರಿದೆ. ಅಲ್ಪಸಂಖ್ಯಾತರ ರಕ್ಷಣೆಯ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಪ್ರತಿಭಟನೆ ವೇಳೆ ಅಲ್ಪಸಂಖ್ಯಾತ ವ್ಯಕ್ತಿಗೆ ಸೇರಿದ ಬಸ್ ಮೇಲೆ ಕಲ್ಲು ತೂರಾಟ ನಡೆಸಲು ಪ್ರೇರಣೆ ನೀಡಿದೆ ಎಂದು ಆರೋಪಿಸಿದರು.
ಬಿಜೆಪಿ ಪ್ರಮುಖರಾದ ಟಿ.ಎ. ಶನವಾಜ್, ಅರುಣ್ ಶೇಟ್, ಜೆಸ್ಸೆಲ್ ಡಿಸೋಜ, ಫ್ರೆಡ್ರಿಕ್ ಪೌಲ್, ಸಿರಾಜ್ ಮುಡಿಪು, ಎ.ಕೆ. ಜಮಾಲ್, ವಿಲ್ಫ್ರೆಡ್ ಸಲ್ಡಾನ, ಟೀನಾ ಇದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…