ಮಂಗಳೂರು: ನಗರದಲ್ಲಿ ನಡೆಸಿದ ಪ್ರತಿಭಟನೆಯ ವೇಳೆ ರಾಜ್ಯಪಾಲರನ್ನು ಬಾಂಗ್ಲಾ ದೇಶದ ಮಾದರಿಯಲ್ಲಿ ರಾಜ್ಯದಿಂದ ಓಡಿಸುತ್ತೇವೆ ಎಂಬ ಹೇಳಿಕೆ ನೀಡಿ, ಅರಾಜಕತೆ ಸೃಷ್ಟಿಸಲು ಯತ್ನಿಸಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಒತ್ತಾಯಿಸಿದೆ.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಜೋಯಲ್ ಮೆಂಡೋನ್ಸಾ, ‘ನಾಲಿಗೆಯ ಮೇಲೆ ಹಿಡಿತ ಇಲ್ಲದೆ ಮಾತನಾಡುವ ಐವನ್ ಅವರನ್ನು ವಿಧಾನ ಪರಿಷತ್ ಸ್ಥಾನದಿಂದ ಬಿಡುಗಡೆಗೊಳಿಸಬೇಕು. ಅರಾಜಕತೆ ಸೃಷ್ಟಿಸುವ ಕಾಂಗ್ರೆಸ್ ಯತ್ನ ಐವನ್ ಮೂಲಕ ಬಯಲಾಗಿದೆ. ಅವರನ್ನು ಬಂಧಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು’ ಎಂದರು.
ಕಾಂಗ್ರೆಸ್ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆದರೆ, ಇದಕ್ಕೆ ಪ್ರಚೋದನೆ ನೀಡಿದ ಐವನ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸದೆ ಪೊಲೀಸ್ ಇಲಾಖೆ ತಾರತಮ್ಯ ತೋರಿದೆ. ಅಲ್ಪಸಂಖ್ಯಾತರ ರಕ್ಷಣೆಯ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಪ್ರತಿಭಟನೆ ವೇಳೆ ಅಲ್ಪಸಂಖ್ಯಾತ ವ್ಯಕ್ತಿಗೆ ಸೇರಿದ ಬಸ್ ಮೇಲೆ ಕಲ್ಲು ತೂರಾಟ ನಡೆಸಲು ಪ್ರೇರಣೆ ನೀಡಿದೆ ಎಂದು ಆರೋಪಿಸಿದರು.
ಬಿಜೆಪಿ ಪ್ರಮುಖರಾದ ಟಿ.ಎ. ಶನವಾಜ್, ಅರುಣ್ ಶೇಟ್, ಜೆಸ್ಸೆಲ್ ಡಿಸೋಜ, ಫ್ರೆಡ್ರಿಕ್ ಪೌಲ್, ಸಿರಾಜ್ ಮುಡಿಪು, ಎ.ಕೆ. ಜಮಾಲ್, ವಿಲ್ಫ್ರೆಡ್ ಸಲ್ಡಾನ, ಟೀನಾ ಇದ್ದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…