Featured

ಐಶ್ವರ್ಯಗೌಡ  ವಂಚನೆ ಪ್ರಕರಣ : ಡಿ.ಕೆ.ಸುರೇಶ್‌ಗೆ ED ಸಮನ್ಸ್ – vishwanews24

ಐಶ್ವರ್ಯಗೌಡ  ವಂಚನೆ ಪ್ರಕರಣ : ಡಿ.ಕೆ.ಸುರೇಶ್‌ಗೆ ED ಸಮನ್ಸ್

ಬೆಂಗಳೂರು: ಐಶ್ವರ್ಯಗೌಡ  ವಂಚನೆ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್  ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಕೊಟ್ಟಿದೆ.

ಐಶ್ವರ್ಯಗೌಡ ಕೇಸ್‌ನಲ್ಲಿ ಈಗಾಗಲೇ ಶಾಸಕ ವಿನಯ್ ಕುಲಕರ್ಣಿ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಡಿ.ಕೆ.ಸುರೇಶ್‌ಗೆ ಇ.ಡಿ ಶಾಕ್ ಕೊಟ್ಟಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಿಕೆ ಸುರೇಶ್, ಮಧ್ಯಾಹ್ನ 12-30 ಗಂಟೆಗೆ ಇ.ಡಿಯವರು ಬಂದು ಸಮನ್ಸ್ ನೀಡಿದ್ದಾರೆ. ನಾನು ಹೊರಗೆ ಹೋಗಿದ್ದೆ ಇಡಿಯವರು ಬಂದಿದ್ದಾರೆ ಎಂದು ಗೊತ್ತಾದ ಮೇಲೆ ಬಂದೆ. ಅವರು ಸಮನ್ಸ್ ಕೊಟ್ಟಿದ್ದಾರೆ. ಸಮನ್ಸ್ನಲ್ಲಿ ಯಾವ ಪ್ರಕರಣ ಅಂತ ಇಲ್ಲ. ಆದರೆ, ದಾಖಲಾತಿ ನೋಡಿದಾಗ ಈ ಪ್ರಕರಣ ಅಂತ ಗೊತ್ತಾಯ್ತು ಎಂದು ತಿಳಿಸಿದ್ದಾರೆ.

 

ಗುರುವಾರ ಬನ್ನಿ ಅಂದಿದ್ದಾರೆ. ಆದರೆ ಪೂರ್ವ ನಿಯೋಜಿತ ಕಾರ್ಯಕ್ರಮ ಇದೆ. ಅದಕ್ಕೆ ಸೋಮವಾರ ಬರುತ್ತೇನೆ ಎಂದು ಮೌಕಿಕವಾಗಿ ತಿಳಿಸಿದ್ದೇನೆ. ಈಗ ಇ-ಮೇಲ್ ಮೂಲಕ ಅಧಿಕೃತವಾಗಿ ತಿಳಿಸುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ನಾನು ಯಾವುದೇ ವ್ಯವಹಾರ ನಡೆಸಿಲ್ಲ. ಅವರು (ಐಶ್ವರ್ಯಗೌಡ) ನಮ್ಮ ಕ್ಷೇತ್ರದವರು ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೆ. ನನ್ನ ತಂಗಿ ಅಂತಾ ಹೇಳಿಕೊಂಡು ಒಡಾಡುವುದರ ಬಗ್ಗೆ ನಾನೇ ದೂರು ಕೊಟ್ಟಿದ್ದೇನೆ. ಇ.ಡಿಯವರು 7-8 ದಾಖಲೆಗಳನ್ನು ಕೇಳಿದ್ದಾರೆ. ನನ್ನ ಬಳಿ ದಾಖಲೆ ಕೇಳಿದ್ದು ಅಸಂಬದ್ಧ. ಇ.ಡಿ ವಿಚಾರಣೆಗೆ ಹೋದಾಗ ಅಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

9 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

9 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

9 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

10 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

10 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

12 hours ago