ಮಂಗಳೂರು/ಉಡುಪಿ : ಐಷಾರಾಮಿ ಕಾರು ನೋಂದಣಿಯ ವೇಳೆ ತೆರಿಗೆ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ, ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಮತ್ತು ಉಡುಪಿ ಆರ್.ಟಿ.ಓ ಕಚೇರಿಗಳಲ್ಲಿ ಕಡತಗಳ ಪರಿಶೀಲನೆ ನಡೆಸಿದ್ದಾರೆ.
ಉಡುಪಿ ಆರ್.ಟಿ.ಓ. ಕಚೇರಿಯಲ್ಲಿ ತೆರಿಗೆ ಮೊತ್ತವನ್ನು ಕಡಿಮೆ ಮಾಡಿ ಒಂದು ಬಿಎಂಡಬ್ಲ್ಯು ಕಾರನ್ನು ನೋಂದಣಿ ಮಾಡಲಾಗಿದೆ. ಇದರಿಂದ ಸರ್ಕಾರಕ್ಕೆ ಸುಮಾರು 85 ಲಕ್ಷ ರೂ.ಗಳಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಈಗಾಗಲೇ ಪ್ರಕರಣ ದಾಖಲಾಗಿದೆ.
ವಾಹನದ ನೋಂದಣಿಗೆ ಸಂಬಂಧಿಸಿದ ಕೆಲವೊಂದು ಪ್ರಕ್ರಿಯೆಗಳು ಮಂಗಳೂರು ಆರ್.ಟಿ.ಓ. ಕಚೇರಿಯಲ್ಲೂ ನಡೆದಿರುವ ಕಾರಣ, ಲೋಕಾಯುಕ್ತ ಅಧಿಕಾರಿಗಳು ಎರಡೂ ಕಡೆಗಳ ಕಡತಗಳನ್ನು ಪರಿಶೀಲಿಸಿದ್ದಾರೆ.
ಪರಿಶೀಲನೆಯ ವೇಳೆ ಹಲವಾರು ವಿವರಗಳು ಬೆಳಕಿಗೆ ಬಂದಿದ್ದು, ಈ ಬಗ್ಗೆ ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಾಗುವುದು. ಅಲ್ಲಿಂದ ಬರುವ ನಿರ್ದೇಶನದ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಪ್ರಭಾರ ಅಧೀಕ್ಷಕ ಕುಮಾರ ಚಂದ್ರ ಅವರು ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…