Featured

ಐಸಿವೈಎಂ ಉದ್ಯಾವರ : ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ -Vishwanews24

ಉಡುಪಿ : ಉದ್ಯಾವರದ ಸಂತ ಫ್ರಾನ್ಸಿಸ್ ಜೇವಿಯರ್ ದೇವಾಲಯದ ವ್ಯಾಪ್ತಿಗೆ ಒಳಪಟ್ಟ ಭಾರತೀಯ ಕಥೋಲಿಕ್ ಯುವ ಸಂಚಲನ ಐಸಿವೈಎಂ ಯುವ ಸಂಘಟನೆಯೂ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಜನವರಿ 19 ರಂದು ಸುವರ್ಣ ಮಹೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭ ನಡೆಯಲಿದೆ.

ಉಡುಪಿ ಮದರ್ ಆಫ್ ಸಾರೋಸ್ ದೇವಾಲಯದ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾ. ವಲೇರಿಯನ್ ಮೆಂಡೋನ್ಸಾ, ಸುವರ್ಣ ಮಹೋತ್ಸವದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ, ಕಾರ್ಯಕ್ರಮಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿ ಧರ್ಮಪ್ರಾಂತ್ಯದ ಕುಲಪತಿ , ಐಸಿವೈಎಂ ಸಂಘಟನೆಯ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಫಾ. ಸ್ಟ್ಯಾನಿ ಬಿ ಲೋಬೊ, ಪಾಲನಾ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೋರನ್ನ, ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಮೈಕಲ್ ಡಿಸೋಜ, ಕಾರ್ಯದರ್ಶಿ ಡೋರಾ ಅರೋಜ, ಕೋಶಾಧಿಕಾರಿ ರೋಶನ್ ಕ್ರಾಸ್ತಾ, ಐಸಿವೈಎಂ ಅಧ್ಯಕ್ಷ ರೊಯಲ್ ಕಾಸ್ತೆಲಿನೋ, ಕಾರ್ಯದರ್ಶಿ ಪ್ರಿಯಾಂಕಾ ಉಪಸ್ಥಿತರಿದ್ದರು. ಕಾರ್ಯಕ್ರಮಗಳ ಸಂಚಾಲಕ ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯಕ್ರಮವನ್ನು ನಿರೂಪಿಸಿದರು.

ಸುವರ್ಣ ಮಹೋತ್ಸವವನ್ನು ಮಾಜಿ ರಾಜ್ಯಪಾಲೆ ಮಾರ್ಗರೆಟ್ ಆಳ್ವಾ ಉದ್ಘಾಟಿಸಲಿದ್ದಾರೆ. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉಡುಪಿ ದೇವಾಲಯದ ಪ್ರಧಾನ ಧರ್ಮಗುರು ವಂದನೀಯ ಫಾ. ವಲೇರಿಯನ್ ಮೆಂಡೋನ್ಸಾ, ಸ್ಥಾಪಕ ನಿರ್ದೇಶಕ ವಂದನೀಯ ಫಾ. ಹೆನ್ರಿ ಫೆರ್ನಾಂಡಿಸ್ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಐಸಿವೈಎಂ ರಾಜ್ಯ ಮುಖಂಡರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಐಸಿವೈಎಂ ಸುವರ್ಣ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago