ಕುಂದಾಪುರ: ಮುಂದಿನ ವರ್ಷದ ಅಂತಾರಾಷ್ಟ್ರೀಯ ಕಿವುಡರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಪೂರ್ವಭಾವಿಯಾಗಿ ಯುಎಇಯಲ್ಲಿ ಅ. 2ರಿಂದ ಐಸಿಸಿ ಕಿವುಡರ ಚಾಂಪಿಯನ್ಸ್ ಟ್ರೋಫಿ-2022 ಟಿ20 ಪಂದ್ಯಾವಳಿ ನಡೆಯಲಿದೆ. ಭಾರತ ತಂಡದಲ್ಲಿ ಕುಂದಾಪುರ ಮೂಲದ ಪೃಥ್ವಿರಾಜ್ ಶೆಟ್ಟಿ ಹುಂಚನಿ ಸ್ಥಾನ ಪಡೆದಿದ್ದು, ಆಡುವ ಬಳಗದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
ಈ ಮೊದಲು ಸೆಪ್ಟಂಬರ್-ಅಕ್ಟೋಬರ್ನಲ್ಲಿ ವಿಶ್ವಕಪ್ ನಿಗದಿಪಡಿಸಲಾಗಿದ್ದು, ಆದರೆ ಈಗ ಅದನ್ನು 2023ರ ಮಾರ್ಚ್-ಮೇಗೆ ಮುಂದೂಡಲಾಗಿದೆ. ಕತಾರ್ ಅಥವಾ ಆಸ್ಟ್ರೇಲಿಯದಲ್ಲಿ ಕಿವುಡರ ಐಸಿಸಿ ವಿಶ್ವಕಪ್ ಪಂದ್ಯಾವಳಿ ನಡೆಯಲಿದೆ. ಇದಕ್ಕೂ ಮುಂಚಿತವಾಗಿ ಅ. ಒಂದರಿಂದ ಅ. 9ರ ವರೆಗೆ ಚಾಂಪಿಯನ್ಸ್ ಟ್ರೋಫಿ ನಡೆಯುತ್ತಿದ್ದು, ಕುತೂಹಲ ಮೂಡಿಸಿದೆ. ಅ. 2ರಂದು ಭಾರತ-ಪಾಕಿಸ್ಥಾನ ಎದುರಾಗಲಿವೆ. ಬಳಿಕ ದಕ್ಷಿಣ ಆಫ್ರಿಕಾ (ಅ. 4), ಬಾಂಗ್ಲಾದೇಶ (ಅ. 5) ಹಾಗೂ ಆಸ್ಟ್ರೇಲಿಯವನ್ನು (ಅ. 7) ಎದುರಿಸಲಿದೆ.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಭಾರತ ತಂಡಕ್ಕೆ ಆಯ್ಕೆಯಾಗಿರುವ 31 ವರ್ಷದ ಪೃಥ್ವಿರಾಜ್ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಗೋಳಿಹೊಳೆ ಗ್ರಾಮದ ಹುಂಚನಿಯ ದಿ| ಸುಭಾಶ್ಚಂದ್ರ ಶೆಟ್ಟಿ ಹಾಗೂ ಶೀಲಾವತಿ ದಂಪತಿಯ ಪುತ್ರ. ತಂಡದ ಪ್ರಧಾನ ವೇಗಿಯಾಗಿರುವ ಇವರು, ಕೆಳ ಕ್ರಮಾಂಕದ ಬ್ಯಾಟರ್ ಆಗಿಯೂ ಮಿಂಚಬಲ್ಲರು.
ಏಕೈಕ ಕನ್ನಡಿಗ
ಹೊಸದಿಲ್ಲಿಯಲ್ಲಿ ಒಂದು ತಿಂಗಳ ಕಾಲ ತರಬೇತಿ ಮುಗಿಸಿದ ಭಾರತ ತಂಡ ಟ್ರೋಫಿ ಗೆಲ್ಲುವ ವಿಶ್ವಾಸದೊಂದಿಗೆ ಯುಎಇಗೆ ಪ್ರಯಾಣ ಬೆಳೆಸಿದೆ. ಪೃಥ್ವಿರಾಜ್ ಈ 15 ಮಂದಿಯ ತಂಡದ ಏಕೈಕ ಕನ್ನಡಿಗರಾಗಿದ್ದಾರೆ.
ವೈಕಲ್ಯವನ್ನೇ ಸವಾಲಾಗಿ ಸ್ವೀಕರಿಸಿದ ಧೀರ
ಪೃಥ್ವಿರಾಜ್ ಹುಟ್ಟು ಕಿವುಡರಾಗಿದ್ದರೂ ಕ್ರಿಕೆಟ್ನಲ್ಲಿ ಸಾಧನೆ ಮಾಡಬೇಕು ಎನ್ನುವ ಕನಸಿಗೆ ಈ ವೈಕಲ್ಯ ಅಡ್ಡಿಯಾಗಲಿಲ್ಲ. ಈ ವೈಕಲ್ಯವನ್ನೇ ಮೆಟ್ಟಿನಿಂತು ಇಂದು ದೇಶದ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವುದು ಅಸಾಮಾನ್ಯ ಸಾಧನೆಯೇ ಆಗಿದೆ.
ಇದನ್ನೂ ಓದಿ: ಉಡುಪಿ: ಪ್ರಧಾನಿ ಮೋದಿ ಮುಖ ನೋಡಿ ಮತ ನೀಡಿದ ಜನರಿಗೆ ಸಂಸದೆ ಶೋಭಾ ನ್ಯಾಯ ಒದಗಿಸಲಿ : ಹರೀಶ್ ಕಿಣಿ – Vishwanews24
ಇವರು ಅಂಪಾರು ಮೂಡುಬಗೆಯ ವಾಗ್ಜ್ಯೋತಿ ವಿಶೇಷ ಮಕ್ಕಳ ಶಾಲೆಯ ಹಳೆ ವಿದ್ಯಾರ್ಥಿ. ವಿಶೇಷ ಕ್ರಿಕೆಟ್ ಟೂರ್ನಿಗಳಲ್ಲಿ ಮಾತ್ರವಲ್ಲದೆ ಎಲ್ಲರಂತೆ ಎಂಪಿಲ್ನಲ್ಲಿ ಐಕಾನ್ ಆಟಗಾರನಾಗಿ, ಕುಂದಾಪುರದ ಟಾರ್ಪಡೋಸ್ ತಂಡದ ಆಟಗಾರನಾಗಿಯೂ ಮಿಂಚಿದ್ದಾರೆ. ಚಕ್ರವರ್ತಿ ತಂಡದ ಅರೆಕಾಲಿಕ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕರ್ನಾಟಕ ಮೂಗರ ಕ್ರಿಕೆಟ್ ತಂಡದ ಆಟಗಾರನಾಗಿ, ಕರ್ನಾಟಕ ತಂಡದ ನಾಯಕನಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…