ಮಂಗಳೂರು : ಬಂಧನಕ್ಕೊಳಗಾಗಿದ್ದ ಕೇಂದ್ರ ಮಾಜಿ ಸಚಿವ ಪಿ. ಚಿದಂಬರ ಅವರ ಹಗರಣಗಳ ಬಗ್ಗೆ ಕಾಂಗ್ರೇಸ್ ಹಿರಿಯ ಮುಖಂಡ ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ ಅವರು ಹೇಳಿದ್ದ ಭವಿಷ್ಯ ಈಗ ನಿಜವಾಗಿದೆ.ಈ ಕುರಿತ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
2018ರ ವಿಧಾನಸಭೆ ಚನಾವಣೆ ಸಂದರ್ಭದಲ್ಲಿ ಕಾಂಗ್ರೇಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೇಸ್ ನ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಪಿ. ಚಿದಂಬರ ಅವರ ಅಕ್ರಮಗಳ ಬಗ್ಗೆ ಮಾತನಾಡಿದ್ದರು, ಚಿದಂಬರ ಅವರ ಏನು ಮಾಡಿದ್ದಾರೆ ಎಂದು ಬಿಜೆಪಿ ಅವರಿಗೆ ಹೇಳಿದರೆ ಕಾಂಗ್ರೇಸ್ ಸರ್ವನಾಶವಾಗುತ್ತದೆ. ನೋಡಿ ಒಂದಲ್ಲಾ ಒಂದು ದಿನ ಬಿಜೆಪಿಯವರು ಚಿದಂಬರ ಅವರ ಅಕ್ರಮಗಳನ್ನು ಬಯಲಿಗೆ ತರುತ್ತಾರೆ ಎಂದು ಭವಿಷ್ಯ ನುಡಿದಿದ್ದರು.
ಜಾಹಿರಾತು
ಐ ಎನ್ ಎಕ್ಸ್ ಅವ್ಯವಹಾರದಲ್ಲಿ ಚಿದಂಬರಂ ರವರನ್ನು ಸಿಬಿಐ ಆ.21ರಂದು ಬಂಧಿಸಿತ್ತು . ಮನಮೋಹನ್ ಸಿಂಗ್ ಸರಕಾರದಲ್ಲಿ ವಿತ್ತ ಸಚಿವರಾಗಿ ಕಾರ್ಯ ನಿರ್ವಹಿಸಿದ ಚಿದಂಬರಂ ತನ್ನ ಪುತ್ರ ಕಾರ್ತಿ ಚಿದಂಬರಂ ಮೂಲಕ ಐ ಏನ್ ಎಕ್ಸ್ ಸಂಸ್ಥೆಗೆ ವಿದೇಶಿ ಬಂಡವಾಳ ಹರಿದು ಬರಲು ಬೇಕಾದ ಕಾನೂನು ತೊಡಕುಗಳನ್ನು ನಿವಾರಿಸಿದ್ದಾರೆ ಇದಕ್ಕಾಗಿ ಅವರು ಲಂಚ ಪಡೆದಿದ್ದಾರೆ ಎಂಬ ಆರೋಪವನ್ನು ಚಿದಂಬರಂ ಮೇಲೆ ಸಿಬಿಐ ವಿಧಿಸಿದೆ.
ಕಾಂಗ್ರೇಸ್ ನ ಹಿರಿಯ ನಾಯಕ ಪೂಜಾರಿ ಅವರು ಚಿದಂಬರ ಅವರ ಬಗ್ಗೆ ಹೇಳಿದ್ದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪೂಜಾರಿ ಅವರ ಭವಿಷ್ಯ ಇಂದು ನಿಜವಾಗಿದೆ ಎಂದು ಪ್ರತಿಕ್ರಿಯೆಗಳು ಬರುತ್ತಿದೆ.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…