ಬೆಂಗಳೂರು: ಚಂದನವನದ ಬೇಡಿಕೆಯ ನಟಿ ಅದಿತಿ ಪ್ರಭುದೇವ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ಖಚಿತಪಡಿಸಿದ್ದಾರೆ.
ಸೋಮವಾರ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇನ್ಸ್ಟಾಗ್ರಾಂನಲ್ಲಿ ನಿಶ್ಚಿತಾರ್ಥದ ವಿಷಯವನ್ನು ಖಚಿತಪಡಿಸಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ದಾವಣಗೆರೆ ಮೂಲದ ಹುಡುಗನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ಅದರ ಜತೆಯಲ್ಲಿ ‘ಒಂದು ಕನಸಿನಂತೆ ಈ ಕನಸು ನಿಜವಾಗಿದೆ’ ಎಂದು ಬರೆದಿದ್ದಾರೆ. ಹಾಗೆ ಹ್ಯಾಶ್ಟ್ಯಾಗ್ ಹಾಕಿ ಎಂಗೆಜ್ಡ್ ಎಂದು ಬರೆದುಕೊಂಡಿದ್ದಾರೆ.
ಸದ್ಯ ದಾವಣಗೆರೆ ಮೂಲದ ಅದಿತಿ ತನ್ನ ಭಾವಿ ಪತಿಯೊಂದಿಗಿನ ಫೋಟೋವನ್ನು ಹಂಚಿಕೊಳ್ಳುವ ಮೂಲಕ ತಾನು ಮದುವೆಯಾಗುತ್ತಿರುವ ವಿಚಾರವನ್ನು ರಿವೀಲ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ಎರಡೂ ಕುಟುಂಬಗಳು ತಾಂಬೂಲ ಬದಲಾಯಿಸಿಕೊಂಡಿದ್ದು, ವಿವಾಹದ ನಿಶ್ಚಿತಾರ್ಥವಾಗಿದೆ.
ಸೋಮವಾರಪೇಟೆಯ ಕಾಫಿ ಬೆಳೆಗಾರ ಪಿ.ಡಿ.ಚಂದ್ರಕಾಂತ್ ಹಾಗೂ ಸುಚರಿತ ದಂಪತಿಗಳ ಪುತ್ರ ಯಶಸ್ವಿಯನ್ನು ಅದಿತಿ ವರಿಸಲಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…