Featured

ಒಂದು ತಿಂಗಳಲ್ಲೇ ಶತ ಕೋಟಿ ಗಳಿಸುವ ಮೂಲಕ ಆದಾಯದಲ್ಲಿ ದಾಖಲೆ ಬರೆದ ತಿರುಪತಿ ತಿಮ್ಮಪ್ಪ -Vishwanews24

ಹೈದರಾಬಾದ್: ಆಂಧ್ರ ಪ್ರದೇಶದ ತಿರುಪತಿ ತಿಮ್ಮಪ್ಪ ಒಂದು ತಿಂಗಳಲ್ಲೇ ಶತ ಕೋಟಿ ಗಳಿಸುವ ಮೂಲಕ ಆದಾಯದಲ್ಲೂ ದಾಖಲೆ ಬರೆದಿದ್ದಾನೆ.

ತಿರುಪತಿ ತಿಮ್ಮಪ್ಪನ ಹುಂಡಿಗೆ 2019 ರ ಜೂನ್ ತಿಂಗಳಲ್ಲಿ 100 ಕೋಟಿಗೂ ಹೆಚ್ಚು ಆದಾಯ ಹರಿದುಬಂದಿದೆ. ಜೂನ್ ತಿಂಗಳ ಅಂಕಿ ಅಂಶಗಳಿಗೆ ಹೋಲಿಸಿದರೆ 2019 ಜೂನ್ ತಿಂಗಳಲ್ಲಿ ಲಡ್ಡು ವಿತರಣೆ, ಅನ್ನ ಪ್ರಸಾದ ವಿತರಣೆ, ಮುಡಿ ಕೊಟ್ಟವರ ಸಂಖ್ಯೆ ಸೇರಿದಂತೆ ಎಲ್ಲ ರೀತಿಯಲ್ಲೂ ಹೊಸ ದಾಖಲೆ ನಿರ್ಮಿಸಿದೆ.

ಕಳೆದ ವರ್ಷ ಜೂನ್ ತಿಂಗಳಲ್ಲಿ 24.10 ಲಕ್ಷ ಭಕ್ತಾದಿಗಳು ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದರು. ಈ ವರ್ಷ ಹೆಚ್ಚುವರಿಯಾಗಿ 2.56ಲಕ್ಷ ಭಕ್ತಾದಿಗಳು ದೇವರ ದರ್ಶನ ಪಡೆದುಕೊಂಡಿದ್ದಾರೆ. ಅದರಂತೆಯೇ ಕಳೆದ ವರ್ಷದ ಜೂನ್ ತಿಂಗಳಲ್ಲಿ ಶ್ರೀವಾರಿ ಹುಂಡಿಗೆ 91.81 ಕೋಟಿ ಹರಿದುಬಂದಿತ್ತು. ಈ ವರ್ಷ 100.37 ಕೋಟಿ ರೂಪಾಯಿ ದಾಖಲೆಯ ಹಣ ಸಂಗ್ರಹವಾಗಿದೆ.

ಈ ವರ್ಷ ದೇವಾಲಯದ ಮಂಡಳಿಯ ವಸತಿಗಳಲ್ಲಿ ಶೇ 107ರಷ್ಟು ಭಕ್ತರು ವಾಸ್ತವ್ಯ ಹೂಡಿದ್ದರು. ಕಳೆದ ವರ್ಷ ಶೇ.106ರಷ್ಟು ಟಿಟಿಡಿ(ತಿರುಮಲ ತಿರುಪತಿ ದೇವಸ್ಥಾನಮ್) ವಸತಿಯನ್ನು ಬಳಸಿಕೊಂಡಿದ್ದರು. ಈ ವರ್ಷ 1.13 ಕೋಟಿ ಲಡ್ಡುಗಳನ್ನು ಭಕ್ತರಿಗೆ ವಿತರಿಸಲಾಗಿದೆ.

ಇದೇ ತಿಂಗಳು ಕಳೆದ ವರ್ಷ ಭಕ್ತಾದಿಗಳಿಗೆ ಸುಮಾರು 95.58 ಲಕ್ಷ ಲಡ್ಡುಗಳನ್ನು ವಿತರಿಸಲಾಗಿತ್ತು. ಅಷ್ಟೇ ಅಲ್ಲದೆ ಈ ವರ್ಷದ ಜೂನ್‍ನಲ್ಲಿ 12.88 ಲಕ್ಷ ಮಂದಿ ತಿಮ್ಮಪ್ಪನಿಗೆ ಮುಡಿ ನೀಡಿದ್ದಾರೆ. 71.02 ಲಕ್ಷ ಭಕ್ತಾದಿಗಳಿಗೆ ಅನ್ನ ಪ್ರಸಾದ ವಿತರಣೆ ಮಾಡಲಾಗಿದೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

6 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

6 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

6 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

7 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

8 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

8 hours ago