ನವದೆಹಲಿ, –ಕಾಂಗ್ರೆಸ್ ಜನಪ್ರತಿನಿಧಿಗಳು ಒಂದು ತಿಂಗಳವರೆಗೆ ಯಾವುದೇ ಸುದ್ದಿವಾಹಿನಿಗಳಲ್ಲಿ ಭಾಗವಹಿಸುವುದು ಬೇಡ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಅದೇ ವೇಳೆ ಕಾಂಗ್ರೆಸ್ ಪ್ರತಿನಿಧಿಗಳನ್ನು ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಡಿ ಎಂದು ಸುರ್ಜೇವಾಲಾ ಸುದ್ದಿಮಾಧ್ಯಮಗಳಿಗೆ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ನಾಯಕರು, ಪ್ರತಿನಿಧಿ ಮತ್ತು ವಕ್ತಾರರು ಯಾವುದೇ ರೀತಿಯ ಬಹಿರಂಗ ಹೇಳಿಕೆಗಳನ್ನು ನೀಡದಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಒಂದು ತಿಂಗಳ ಕಾಲ ಸುದ್ದಿವಾಹಿನಿಗಳ ಜತೆ ಚರ್ಚೆ, ಮಾತುಕತೆ ಅಥವಾ ಮುಕ್ತ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಪಕ್ಷದ ವಕ್ತಾರರು ಮತ್ತು ಇತರ ಪ್ರತಿನಿಧಿಗಳಿಗೆ ಕಟ್ಟಪ್ಪಣೆ ಮಾಡಿದೆಯಲ್ಲದೆ ಅವರನ್ನು ವಾರ್ತಾವಾಹಿನಿಗಳಲ್ಲಿ ಸಂವಾದಕ್ಕೆ ಕಳುಹಿಸದಿರಲು ನಿರ್ಧರಿಸಿದೆ.
ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳನ್ನು ತಮ್ಮ ಕಾರ್ಯಕ್ರಮಗಳಲ್ಲಿ ನಿಯೋಜಿಸದಂತೆ ಎಲ್ಲಾ ಸುದ್ದಿ ಮಾಧ್ಯಮಗಳಿಗೆ, ಸಂಪಾದಕರು ಮನವಿ ಮಾಡುತ್ತೇವೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮುಖ್ಯಸ್ಥ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…