ವಿಜಯಪುರ: ಪ್ರಾದೇಶಿಕ ಪಕ್ಷಗಳ ಮುಗಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ, ಇದು ಬಿಜೆಪಿಯವರ ಅಜೆಂಡಾ ಎಂದು `ಒಂದು ದೇಶ ಒಂದು ಚುನಾವಣೆ’ ಮಸೂದೆ ಮಂಡನೆ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದರು.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ ಒಂದು ಚುನಾವಣೆ ಎನ್ನುವುದು ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ವಿರೋಧವಾಗಿದೆ. ನಮ್ಮ ರಾಷ್ಟ್ರೀಯ ನಾಯಕರು ಇದನ್ನು ವಿರೋಧ ಮಾಡಿದ್ದಾರೆ ಬಿಜೆಪಿ ಈ ಮೂಲಕ ಸಣ್ಣ ಪಕ್ಷಗಳನ್ನು ಮುಗಿಸಲು ಪ್ಲ್ಯಾನ್ ಹಾಕಿಕೊಂಡಿದೆ. ಇತ್ತೀಚಿಗೆ ಸಣ್ಣ ಪಕ್ಷಗಳಿಗೆ ಹೆಚ್ಚು ನಂಬರ್ಸ್ ಬರುತ್ತಿದೆ. ಹಾಗಾಗಿ ಪ್ರಾದೇಶಿಕ ಪಕ್ಷಗಳ ಮುಗಿಸಲು ಪ್ಲ್ಯಾನ್ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.
ಕೃಷ್ಣಾ ನದಿಗಾಗಿ 40,000 ಕೋಟಿ ರೂ. ಕೊಡುವುದಾಗಿ ಕಾಂಗ್ರೆಸ್ ಹೇಳಿತ್ತು. ಆದರೆ ಎರಡು ವರ್ಷ ಕಳೆದರೂ ಸರ್ಕಾರ ಬಿಡಿಗಾಸನ್ನು ಕೊಟ್ಟಿಲ್ಲ. ಜೊತೆಗೆ 5 ವರ್ಷದಲ್ಲಿ ರಾಜ್ಯಕ್ಕೆ 2 ಲಕ್ಷ ಕೋಟಿ ರೂ. ಹಾಗೂ ಅದರಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗೆ 75 ಸಾವಿರ ಕೋಟಿ ರೂ. ಕೊಡುವುದಾಗಿ ಸರ್ಕಾರ ತಿಳಿಸಿತ್ತು. ಇದುವರೆಗೂ ಯೋಜನೆಗೆ ಬಿಡಿಗಾಸನ್ನು ಕೊಟ್ಟಿಲ್ಲ ಎಂದು ಕೇಳಿದಾಗ ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ ಎಂದು ಹೇಳಿ ಜಾರಿಕೊಂಡರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…