Featured

ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್‌ ಮಾತ್ರ: ಡೀಸೆಲ್‌ ಮಾರಾಟ ಮಿತಿಗೊಳಿಸಿದ ಕೇಂದ್ರ – vishwanews24

ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್‌ ಮಾತ್ರ: ಡೀಸೆಲ್‌ ಮಾರಾಟ ಮಿತಿಗೊಳಿಸಿದ ಕೇಂದ್ರ

ನವದೆಹಲಿ: ಡೀಸೆಲ್‌ ಮಾರಾಟಕ್ಕೆ ಕೇಂದ್ರ ಸರ್ಕಾರ ಮಿತಿ ಹೇರಿದೆ. ಪೆಟ್ರೋಲ್‌ ಬಂಕ್‌ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್‌ ಡೀಸೆಲ್‌ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ.

ಇಂಧನ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟವನ್ನು ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಕೇಂದ್ರ ತಿಳಿಸಿದೆ.

ವಾಣಿಜ್ಯ, ಕೈಗಾರಿಕಾ ಮತ್ತು ಸಾಂಸ್ಥಿಕ ಗ್ರಾಹಕರು ಇನ್ಮುಂದೆ ರಿಟೇಲ್‌ ಬಂಕ್‌ಗಳಲ್ಲಿ ಡೀಸೆಲ್‌ ಖರೀದಿಸುವಂತಿಲ್ಲ. ವಾಣಿಜ್ಯ ಉದ್ದೇಶಕ್ಕೆ ನಿಗದಿಪಡಿಸಿದ ಮಾರಾಟ ಕೇಂದ್ರಗಳಿಂದಲೇ ಇಂಧನ ಖರೀದಿಸಬೇಕು ಎಂದು ಸೂಚಿಸಿದೆ. ಪೆಟ್ರೋಲ್ ಪಂಪ್‌ಗಳಲ್ಲಿ ಡೀಸೆಲ್ ಲೀಟರ್‌ಗೆ 95.20 ರೂ.ಗಳಾಗಿದ್ದರೆ, ಬೃಹತ್ ಮಾರಾಟ ಕೇಂದ್ರಗಳಲ್ಲಿ ಈ ಬೆಲೆ 134.50 ರೂ. ಇದೆ. ದರ ಕಡಿಮೆ ಇರುವುದರಿಂದ ಬೃಹತ್‌ ವಾಹನಗಳ ಗ್ರಾಹಕರು ಪೆಟ್ರೋಲ್‌ ಬಂಕ್‌ಗಳಲ್ಲಿ ಇಂಧನ ಖರೀದಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಹೊಸ ನಿಯಮ ಜಾರಿಗೊಳಿಸಲಾಗಿದೆ.

ರಿಟೇಲ್‌ ಬಂಕ್‌ಗಳಲ್ಲಿ ಡೀಸೆಲ್‌ ಅನ್ನು ವಾಹನದ ಇಂಧನ ಟ್ಯಾಂಕ್‌ಗೇ ತುಂಬಿಸಿ ಮಾರಬೇಕು. ಕ್ಯಾನ್‌, ಬ್ಯಾರೆಲ್‌ಗಳಲ್ಲಿ ತುಂಬಿಸಿ ಮಾರುವಂತಿಲ್ಲ. ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷಿತಾ ಸಂಸ್ಥೆ ಅನುಮತಿಸಿದ ಕ್ಯಾನ್‌ನಲ್ಲಿ ಡೀಸೆಲ್‌ ಖರೀದಿಸಬಹುದು ಎಂದು ಸೂಚನೆ ನೀಡಿದೆ.

ಮಧ್ಯಪ್ರಾಚ್ಯ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಉಂಟಾಗಿದೆ. ಭಾರತದಲ್ಲೂ ಪೆಟ್ರೋಲ್‌ ಮತ್ತು ಡೀಸೆಲ್‌ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಹೀಗಾಗಿ, ರಿಟೇಲ್‌ ಬಂಕ್‌ಗಳಲ್ಲಿ ಇಂಧನ ಕೊರತೆ ಆಗದಂತೆ ನೋಡಿಕೊಳ್ಳಲು ಮಿತಿ ಕ್ರಮ ಅನುಸರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

1 hour ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

2 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

4 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

4 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

4 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

4 hours ago