ಬೆಂಗಳೂರು : ”ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಬಿಜೆಪಿ ಶೇ. 60 ಪಂಚಾಯತ್ಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ” ಎಂದು ಹೇಳಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ”ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಇದು ನೂರಕ್ಕೆ ನೂರು ಸತ್ಯ” ಎಂದಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಟ್ವೀಟ್ ಮಾಡಿರುವ ಅವರು, ”ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನೆಗಳು. ನಮ್ಮ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳೆನ್ನದೆ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಮತ ನೀಡಿ, ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.
”ಗ್ರಾಮಗಳ ಪ್ರಗತಿಯಲ್ಲಿ ದೇಶದ ಉನ್ನತಿ ಅಡಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಜಯಗಳಿಸಿದ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ಗ್ರಾಮವನ್ನು ಸದೃಢಗೊಳಿಸುವ ಕಾರ್ಯದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಬೇಕೆಂಬುದು ನನ್ನ ಸಲಹೆ” ಎಂದು ಹೇಳಿದ್ದಾರೆ.
”ಇನ್ನೂ ಹಲವು ಜಿಲ್ಲೆಗಳಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡು ಫಲಿತಾಂಶ ಹೊರಬಂದಿಲ್ಲ, ಮೀಸಲಾತಿ ಅಡಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಹಂಚಿಕೆಯಾಗಿಲ್ಲ, ಆಗಲೇ ಯಡಿಯೂರಪ್ಪ ಅವರು ನಮ್ಮ ಪಕ್ಷ 3800ಕ್ಕೂ ಅಧಿಕ ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ” ಎಂದು ಲೇವಡಿ ಮಾಡಿದ್ದಾರೆ.
”ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಯಡಿಯೂರಪ್ಪನವರು ಬಿಜೆಪಿ 60% ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಗೆದ್ದ ಹೆಚ್ಚಿನ ಸಂಖ್ಯೆಯ ಪಂಚಾಯತಿ ಸದಸ್ಯರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ” ಎಂದು ಹೇಳಿದ್ದಾರೆ.
”ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಯೇ ಅಲ್ಲಾಡ್ತಿದೆ, ಅದರ ನಡುವೆಯೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಹಗಲುಗನಸು ಕಾಣ್ತಿದ್ದಾರೆ. ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಇದು ನೂರಕ್ಕೆ ನೂರು ಸತ್ಯ” ಎಂದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…