ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಗೆ ತಮ್ಮ ಪಕ್ಷ ಮುಕ್ತವಾಗಿದೆ, ಎಂದು ತೆಲಂಗಾಣ ಮುಖ್ಯಮಂತ್ರಿ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಪಕ್ಷದ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ ಹೇಳಿದ್ದಾರೆ. ಮೂಲಗಳ ಪ್ರಕಾರ, ಇಂದು ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ರಾವ್, ಗಂಟೆಗೂ ಹೆಚ್ಚು ಕಾಲ 2019ರ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಚುನಾವಣಾ ಪೂರ್ವ ಮೈತ್ರಿ ನಮ್ಮ ಪಕ್ಷಕ್ಕೆ ಯಾವುದೇ ಪ್ರಯೋಜನ ತರದು. ಒಂದು ವೇಳೆ ಬಿಜೆಪಿ ಬಹುಮತದಿಂದ ವಂಚಿತವಾದರೆ ಸರಕಾರ ರಚಿಸಲು ನಾವು ಕೈ ಜೋಡಿಸುತ್ತೇವೆ ಎಂದು ರಾವ್ ಭೇಟಿ ವೇಳೆ ವಾಗ್ದಾನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇತ್ತೀಚೆಗಷ್ಟೇ ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಮತದಾನ ಪ್ರಕ್ರಿಯೆಯಿಂದ ದೂರ ಸರಿಯುವ ಮೂಲಕ ಪರೋಕ್ಷವಾಗಿ ಟಿಆರ್ಎಸ್ ಮೋದಿ ಸರ್ಕಾರಕ್ಕೆ ಬೆಂಬಲ ನೀಡಿತ್ತು. ಎನ್ ಡಿಎ ಮೈತ್ರಿಕೂಟದದಿಂದ ಟಿಡಿಪಿ ಹಿಂದೆ ಸರಿದ ಬಳಿಕ ಬಿಜೆಪಿ ಈಗ ಟಿಆರ್ ಎಸ್ನೊಂದಿಗೆ ನಿಕಟತೆ ಹೊಂದಲು ಯತ್ನಿಸುತ್ತಿದೆ ಎನ್ನಲಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…