ಒಂದೇ ವಾರದಲ್ಲಿ ಮತ್ತೆ ಮರಳು ಪ್ರಾರಂಭ : ರಘುಪತಿ ಭಟ್ -Vishwanews24

ಉಡುಪಿ: ಇನ್ನೊಂದು ವಾರದಲ್ಲಿ ಉಡುಪಿ ಜಿಲ್ಲೆಯಲ್ಲಿ ಮತ್ತೆ ಮರಳುಗಾರಿಕೆ ಪ್ರಾರಂಭಗೊಳ್ಳಲಿದೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಮರಳು ದಿಬ್ಬವನ್ನು ತೆರವುಗೊಳಿಸಲು ಕೆ.ಎಸ್.ಇ.ಝಡ್, ಸಿ.ಆರ್.ಝಡ್ ಸಮಿತಿಯಿಂದ ಬಾಕಿ ಇದ್ದ ನಿರ್ಣಯವನ್ನು ಪೂರ್ಣಗೊಳಿಸಿ ಕಾರ್ಯದರ್ಶಿಯವರು ನೀಡಿದ್ದಾರೆ. ಇನ್ನು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಏಳು ಮಂದಿ ಸದಸ್ಯರ ಸಮಿತಿಯಲ್ಲಿ ಮಂಡಿಸಿ 171 ಜನ ಪರವಾನಗಿದಾರರಿಗೆ ಮರಳನ್ನು ನೀಡಿ ಮರಳು ವಿತರಣೆ ಆ್ಯಪ್ ಮೂಲಕ ಮಾಡಲು ಈ ನಿರ್ಣಯದಿಂದ ಅನುಕೂಲವಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ಮೂಲಕ ಕೈಗೊಂಡ ನಿರ್ಧಾರದಂತೆ ಮತ್ತೆ ಮರಳು ದಿಬ್ಬವನ್ನು ತೆರವುಗೊಳಿಸುವ ಸಂಬಂಧ ಸೂಚನೆ ನೀಡಲಾಗಿದೆ. ಹೀಗಾಗಿ ಒಂದು ವಾರದ ಒಳಗೆ ಉಡುಪಿ ಜಿಲ್ಲೆಯಲ್ಲಿ ಮತ್ತೆ ಮರಳು ಪ್ರಾರಂಭವಾಗಲಿದೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಇವರು ತಿಳಿಸಿದ್ದಾರೆ.

ಜಿಲ್ಲೆಯ ಸ್ವರ್ಣ ನದಿಯಲ್ಲಿ ಗುರುತಿಸಿರುವ ಆರು ದಿಬ್ಬಗಳು, ಸೀತಾ ನದಿಯಲ್ಲಿ ಗುರುತಿಸಿರುವ ಮೂರು ಮರಳು ದಿಬ್ಬಗಳು ಹಾಗೂ ಪಾಪನಾಶಿನಿ ನದಿಯಲ್ಲಿ ಗುರುತಿಸಿರುವ ಒಂದು ದಿಬ್ಬ ಸೇರಿದಂತೆ ಉಡುಪಿ ತಾಲೂಕಿನ ಒಟ್ಟು 10 ದಿಬ್ಬಗಳಲ್ಲಿ ಲಭ್ಯವಿರುವ 7.13 ಲಕ್ಷ ಮೆಟ್ರಿಕ್ ಟನ್ ಮರಳುಗಳ ತೆರವಿಗೆ ಪ್ರಾಧಿಕಾರ ತನ್ನ ಅನುಮೋದನೆ ನೀಡಿದೆ.

 

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 days ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 days ago