ವಾರಣಾಸಿ :ಉತ್ತರ ಪ್ರದೇಶದ ವಾರಣಾಸಿ ಕ್ಯಾಂಟ್ ರೈಲು ನಿಲ್ದಾಣದಲ್ಲಿ ಗುರುವಾರ ಒಂದೇ ಮಾರ್ಗದಲ್ಲಿ ಎರಡು ರೈಲುಗಳು ಮುಖಾಮುಖಿಯಾಗಿವೆ. ಇದನ್ನು ಕಂಡ ವಿಶೇಷ ರೈಲಿನ ಲೋಕೋ ಪೈಲಟ್ (ರೈಲು ಚಾಲಕ) ಏಕಾಏಕಿ ತುರ್ತು ಬ್ರೇಕ್ ಹಾಕಿ ರೈಲನ್ನು ನಿಲ್ಲಿಸಿದರು. ಅವರ ಬುದ್ಧಿವಂತಿಕೆಯಿಂದಾಗಿ ದೊಡ್ಡ ರೈಲು ಅಪಘಾತ ತಪ್ಪಿದೆ.
ಘಟನೆ ಬಗ್ಗೆ ಮಾಹಿತಿ ಬಂದ ತಕ್ಷಣ ಇಡೀ ಇಲಾಖೆಯಲ್ಲಿ ಆತಂಕ ಮನೆ ಮಾಡಿತ್ತು. ಹೆಚ್ಚುವರಿ ವಿಭಾಗೀಯ ರೈಲ್ವೇ ವ್ಯವಸ್ಥಾಪಕ ಲಾಲ್ಜಿ ಚೌಧರಿ ಮತ್ತು ನಿಲ್ದಾಣದ ನಿರ್ದೇಶಕ ಅರ್ಪಿತ್ ಗುಪ್ತಾ ಸ್ಥಳ ಪರಿಶೀಲನೆ ನಡೆಸಿದರು. ಈ ಸಂಪೂರ್ಣ ಪ್ರಕರಣದ ತನಿಖೆಗೆ ಜಂಟಿ ಸಮಿತಿಯನ್ನು ರಚಿಸಲಾಗಿದೆ.
ಚೈನ್ ಎಳೆಯಲು ಕಾರಣಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ತನಿಖೆಗಾಗಿ ಐವರು ಸದಸ್ಯರ ಜಂಟಿ ಸಮಿತಿಯನ್ನು ರಚಿಸಲಾಗಿದೆ ಎಂದು ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಲಾಲ್ಜಿ ಚೌಧರಿ ತಿಳಿಸಿದ್ದಾರೆ. 48 ಗಂಟೆಗಳಲ್ಲಿ ತನಿಖಾ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…