ಬೆಂಗಳೂರು: ಟೆಸ್ಟ್ ರೈಡ್ ನೆಪದಲ್ಲಿ ದುಬಾರಿ ಬೆಲೆಯ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಮಂಜುನಾಥ ಹೆಗಡೆ (20) ಎಂಬಾತನನ್ನು ಬಂಧಿಸಿರುವ ಎಲೆಕ್ಟ್ರಾನಿಕ್ಸಿಟಿ ಪೊಲೀಸರು, ₹ 12 ಲಕ್ಷ ಮೌಲ್ಯದ ಬುಲೆಟ್ ಹಾಗೂ ಐದು ಕೆಟಿಎಂ ಬೈಕ್ಗಳನ್ನು ಜಪ್ತಿ ಮಾಡಿದ್ದಾರೆ.
ಸುಂಕದಕಟ್ಟೆ ನಿವಾಸಿಯಾದ ಈತ, ಪ್ರತಿದಿನ ಒಎಲ್ಎಕ್ಸ್ನಲ್ಲಿ ಜಾಹೀರಾತುಗಳನ್ನು ನೋಡುತ್ತಿದ್ದ. ಕೆಟಿಎಂ ಅಥವಾ ಬುಲೆಟ್ ಬೈಕ್ ಮಾರಾಟಕ್ಕಿದ್ದರೆ, ಕೂಡಲೇ ಅದರ ಮಾಲೀಕರಿಗೆ ಕರೆ ಮಾಡಿ ತಾನು ಖರೀದಿ ಮಾಡುವುದಾಗಿ ಹೇಳುತ್ತಿದ್ದ. ಬಳಿಕ ಬೈಕ್ ನೋಡಬೇಕೆಂದು ಅವರನ್ನು ಕರೆಸಿಕೊಳ್ಳುತ್ತಿದ್ದ.
‘ಒಮ್ಮೆ ಓಡಿಸಿ ನೋಡುತ್ತೇನೆ’ ಎಂದು ನಂಬಿಸಿ ಬೈಕ್ ತೆಗೆದುಕೊಂಡು ಹೋಗುತ್ತಿದ್ದ ಮಂಜುನಾಥ, ವಾಪಸ್ ಬರುತ್ತಲೇ ಇರಲಿಲ್ಲ. ಇದೇ ರೀತಿ ಹುಳಿಮಾವು, ಬನ್ನೇರುಘಟ್ಟ, ಆನೇಕಲ್, ಪರಪ್ಪನ ಅಗ್ರಹಾರ ಹಾಗೂ ಎಲೆಕ್ಟ್ರಾನಿಕ್ ಸಿಟಿ ಠಾಣೆಗಳ ವ್ಯಾಪ್ತಿಯಿಂದ ಆರು ಬೈಕ್ಗಳನ್ನು ಕಳವು ಮಾಡಿದ್ದ ಆರೋಪಿ, ಕಡಿಮೆ ಬೆಲೆಗೆ ಅವುಗಳನ್ನು ಮಾರಾಟ ಮಾಡಿ ಗೋವಾದ ಕ್ಯಾಸಿನೋಗೆ ಹೋಗಿ ಮೋಜು ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.
1 ಮೊಬೈಲ್ 40 ಸಿಮ್: ‘ಪೊಲೀಸರು ಮೊಬೈಲ್ ಸಂಖ್ಯೆಯಿಂದ ತನ್ನನ್ನು ಪತ್ತೆ ಮಾಡಬಹುದೆಂದು ಆತ 40 ಸಿಮ್ಗಳನ್ನು ಇಟ್ಟುಕೊಂಡಿದ್ದ. ಒಬ್ಬರಿಗೆ ಕರೆ ಮಾಡಿ ಬೈಕ್ ಕದ್ದರೆ, ಮತ್ತೆ ಆ ಸಿಮ್ ಬಳಸುತ್ತಿರಲಿಲ್ಲ’ ಎಂದು ಪೊಲೀಸರು ಹೇಳಿದರು.
ಟೆಸ್ಟ್ ರೈಡ್ ನೆಪದಲ್ಲೇ ವಾಹನ ಕದಿಯುವ ಹಳೆ ಆರೋಪಿಗಳ ಫೋಟೊಗಳನ್ನು ದೂರುದಾರರಿಗೆ ತೋರಿಸಿದಾಗ, ಒಬ್ಬರು ಮಂಜುನಾಥನನ್ನು ಗುರುತಿಸಿದರು. ಎಂಟು ತಿಂಗಳ ಹಿಂದೆ ಕೆ.ಜಿ.ಹಳ್ಳಿ ಪೊಲೀಸರಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದ ಈತ ಒಂದೂವರೆ ತಿಂಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.
‘ಆರೋಪಿ ಯಾವ್ಯಾವ ಸಂಖ್ಯೆಗಳಿಂದ ದೂರುದಾರರಿಗೆ ಕರೆ ಮಾಡಿದ್ದನೋ, ಆ ಸಂಖ್ಯೆಗಳನ್ನು ಪಡೆದು ತನಿಖೆ ಪ್ರಾರಂಭಿಸಿದೆವು. 40ರಲ್ಲಿ ಒಂದು ಸಿಮ್ ಮಾತ್ರ ಚಾಲ್ತಿಯಲ್ಲಿತ್ತು. ಅದರ ಜಾಡು ಹಿಡಿದು ಹೊರಟಾಗ ಯಲಹಂಕದಲ್ಲಿ ಆರೋಪಿ ಸಿಕ್ಕಿಬಿದ್ದ’ ಎಂದು ಮಾಹಿತಿ ನೀಡಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…