Featured

ಒಎಲ್ಎಕ್ಸ್ ನೋಡಿ, ಟೆಸ್ಟ್ ರೈಡ್ ನೆಪದಲ್ಲಿ ದುಬಾರಿ ಬೆಲೆಯ ಬೈಕ್‌ಗಳ ಕಳ್ಳತನ ..

ಬೆಂಗಳೂರುಟೆಸ್ಟ್ ರೈಡ್ ನೆಪದಲ್ಲಿ ದುಬಾರಿ ಬೆಲೆಯ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಮಂಜುನಾಥ ಹೆಗಡೆ (20) ಎಂಬಾತನನ್ನು ಬಂಧಿಸಿರುವ ಎಲೆಕ್ಟ್ರಾನಿಕ್‌ಸಿಟಿ ಪೊಲೀಸರು, ₹ 12 ಲಕ್ಷ ಮೌಲ್ಯದ ಬುಲೆಟ್ ಹಾಗೂ ಐದು ಕೆಟಿಎಂ ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.

ಸುಂಕದಕಟ್ಟೆ ನಿವಾಸಿಯಾದ ಈತ, ಪ್ರತಿದಿನ ಒಎಲ್‌ಎಕ್ಸ್‌ನಲ್ಲಿ ಜಾಹೀರಾತುಗಳನ್ನು ನೋಡುತ್ತಿದ್ದ. ಕೆಟಿಎಂ ಅಥವಾ ಬುಲೆಟ್ ಬೈಕ್‌ ಮಾರಾಟಕ್ಕಿದ್ದರೆ, ಕೂಡಲೇ ಅದರ ಮಾಲೀಕರಿಗೆ ಕರೆ ಮಾಡಿ ತಾನು ಖರೀದಿ ಮಾಡುವುದಾಗಿ ಹೇಳುತ್ತಿದ್ದ. ಬಳಿಕ ಬೈಕ್ ನೋಡಬೇಕೆಂದು ಅವರನ್ನು ಕರೆಸಿಕೊಳ್ಳುತ್ತಿದ್ದ.

‘ಒಮ್ಮೆ ಓಡಿಸಿ ನೋಡುತ್ತೇನೆ’ ಎಂದು ನಂಬಿಸಿ ಬೈಕ್ ತೆಗೆದುಕೊಂಡು ಹೋಗುತ್ತಿದ್ದ ಮಂಜುನಾಥ, ವಾಪಸ್ ಬರುತ್ತಲೇ ಇರಲಿಲ್ಲ. ಇದೇ ರೀತಿ ಹುಳಿಮಾವು, ಬನ್ನೇರುಘಟ್ಟ, ಆನೇಕಲ್, ಪರಪ್ಪನ ಅಗ್ರಹಾರ ಹಾಗೂ ಎಲೆಕ್ಟ್ರಾನಿಕ್‌ ಸಿಟಿ ಠಾಣೆಗಳ ವ್ಯಾಪ್ತಿಯಿಂದ ಆರು ಬೈಕ್‌ಗಳನ್ನು ಕಳವು ಮಾಡಿದ್ದ ಆರೋಪಿ, ಕಡಿಮೆ ಬೆಲೆಗೆ ಅವುಗಳನ್ನು ಮಾರಾಟ ಮಾಡಿ ಗೋವಾದ ಕ್ಯಾಸಿನೋಗೆ ಹೋಗಿ ಮೋಜು ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.

1 ಮೊಬೈಲ್‌ 40 ಸಿಮ್: ‘ಪೊಲೀಸರು ಮೊಬೈಲ್ ಸಂಖ್ಯೆಯಿಂದ ತನ್ನನ್ನು ಪತ್ತೆ ಮಾಡಬಹುದೆಂದು ಆತ 40 ಸಿಮ್‌ಗಳನ್ನು ಇಟ್ಟುಕೊಂಡಿದ್ದ. ಒಬ್ಬರಿಗೆ ಕರೆ ಮಾಡಿ ಬೈಕ್ ಕದ್ದರೆ, ಮತ್ತೆ ಆ ಸಿಮ್ ಬಳಸುತ್ತಿರಲಿಲ್ಲ’ ಎಂದು ಪೊಲೀಸರು ಹೇಳಿದರು.

ಟೆಸ್ಟ್ ರೈಡ್ ನೆಪದಲ್ಲೇ ವಾಹನ ಕದಿಯುವ ಹಳೆ ಆರೋಪಿಗಳ ಫೋಟೊಗಳನ್ನು ದೂರುದಾರರಿಗೆ ತೋರಿಸಿದಾಗ, ಒಬ್ಬರು ಮಂಜುನಾಥನನ್ನು ಗುರುತಿಸಿದರು. ಎಂಟು ತಿಂಗಳ ಹಿಂದೆ ಕೆ.ಜಿ.ಹಳ್ಳಿ ಪೊಲೀಸರಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದ ಈತ ಒಂದೂವರೆ ತಿಂಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

‘ಆರೋಪಿ ಯಾವ್ಯಾವ ಸಂಖ್ಯೆಗಳಿಂದ ದೂರುದಾರರಿಗೆ ಕರೆ ಮಾಡಿದ್ದನೋ, ಆ ಸಂಖ್ಯೆಗಳನ್ನು ಪಡೆದು ತನಿಖೆ ಪ್ರಾರಂಭಿಸಿದೆವು. 40ರಲ್ಲಿ ಒಂದು ಸಿಮ್ ಮಾತ್ರ ಚಾಲ್ತಿಯಲ್ಲಿತ್ತು. ಅದರ ಜಾಡು ಹಿಡಿದು ಹೊರಟಾಗ ಯಲಹಂಕದಲ್ಲಿ ಆರೋಪಿ ಸಿಕ್ಕಿಬಿದ್ದ’ ಎಂದು ಮಾಹಿತಿ ನೀಡಿದರು.

 

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

11 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

21 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

38 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

43 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

50 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago