ರಾಜ್ಯ ನ್ಯೂಸ್

ಒಕ್ಕಲಿಗರ ಶ್ರೇಷ್ಠ ಸ್ವಾಮೀಜಿ ಯೋಗಿ ಆದಿತ್ಯನಾಥ್ ಗೆ ಅಪಮಾನ! ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಒಕ್ಕಲಿಗರು..

ಕರ್ನಾಟಕದ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಹಲವಾರು ಹೊಸ ವಾದ ವಿವಾದಗಳು ಹುಟ್ಟಿ ಕೊಳ್ಳುತ್ತಿವೆ. ಪ್ರಚಾರದ ಭರಾಟೆಯಲ್ಲಿ ನಾಯಕರುಗಳು ನಾಲಗೆಗಳನ್ನು ಹರಿಬಿಡುತ್ತಿದ್ದಾರೆ. ಎಲ್ಲಿ ಹೇಗೆ ಮಾತನಾಡಬೇಕು ಎಂಬುದನ್ನು ನಮ್ಮ ನಾಯಕರುಗಳು ಮರೆತಂತೆ ಕಾಣುತ್ತಿದೆ. ಈ ಸಾಲಿಗೆ ಇದೀಗ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿರುವ ದಿನೇಶ್ ಗುಂಡೂರಾವ್ ಅವರು ಸೇರ್ಪಡೆಯಾಗಿದ್ದಾರೆ. ಅವರು ಮೊನ್ನೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಗ್ಗೆ ಆಡಿದ ಮಾತೊಂದು ಇದೀಗ ರಾಜ್ಯಾದ್ಯಂತ ಕಿಚ್ಚು ಹಚ್ಚಿದೆ. ದಿನೇಶ್ ಗುಂಡೂರಾವ್ ವಿರುದ್ಧ ರಾಜ್ಯದ ಮೂಲೆ ಮೂಲೆಯಲ್ಲಿಯೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

‘ಯೋಗಿ ಆದಿತ್ಯನಾಥ್ ಅವರು ಕರ್ನಾಟಕಕ್ಕೆ ಬಂದರೆ ಅವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ’ ಎಂದು ದಿನೇಶ್ ಗುಂಡೂರಾವ್ ಅವರು ಪ್ರಚೋದನಕಾರಿ ಹೇಳಿಕೆಯನ್ನು ನೀಡಿದ್ದರು. ಇದು ಅಕ್ಷರಶಃ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹಾಗೂ ಯೋಗಿಯವರ ಅಭಿಮಾನಿಗಳನ್ನು ಕೆರಳಿಸಿತ್ತು. ರಾಜ್ಯದ ಹಲವೆಡೆ ದಿನೇಶ್ ಗುಂಡೂರಾವ್ ಅವರ ಮೇಲೆ ಪ್ರಕರಣಗಳು ದಾಖಲಾಗಿದೆ. ಬಿಜೆಪಿ ಈಗಾಗಲೇ ಚುನಾವಣಾ ಆಯೋಗಕ್ಕೂ ದೂರು ನೀಡಿದೆ. ಬಿಜೆಪಿಯ ಅಗ್ರಗಣ್ಯ ನಾಯಕರು ದಿನೇಶ್ ಗುಂಡೂರಾವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನೇಶ್ ಗುಂಡೂರಾವ್ ವಿರುದ್ಧ ಹಲವಾರು ಅಭಿಯಾನಗಳು ಪ್ರಾರಂಭವಾಗುತ್ತಿದೆ. ತಕ್ಷಣವೇ ದಿನೇಶ್ ಗುಂಡೂರಾವ್ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕೆಂದು ರಾಹುಲ್ ಗಾಂಧಿಯವರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿರುವ ಮಹಾಂತ ಯೋಗಿ ಆದಿತ್ಯನಾಥರು ನಾಥ ಪರಂಪರೆಗೆ ಸೇರಿದವರಾಗಿದ್ದಾರೆ. ಯೋಗಿ ಆದಿತ್ಯನಾಥರ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ನಾಥ ಪರಂಪರೆಯನ್ನು ಆರಾಧಿಸುವ ಕರ್ನಾಟಕದ ಒಕ್ಕಲಿಗ ಸಮುದಾಯವನ್ನು ಅಪಮಾನ ಮಾಡಲಾಗಿದೆ ಎಂದು ಒಕ್ಕಲಿಗ ಸಮುದಾಯದವರು ಆರೋಪಿಸಿದ್ದಾರೆ. ಯೋಗಿ ಆದಿತ್ಯನಾಥರನ್ನು ಅವಮಾನ ಮಾಡುವ ಮೂಲಕ ವಿವಾದದ ಕಿಡಿ ಆಗಿರುವ ದಿನೇಶ್ ಗುಂಡೂರಾವ್ ಅವರನ್ನು ಯಾವುದೇ ಕಾರಣಕ್ಕೂ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ರಾಜ್ಯ ಒಕ್ಕಲಿಗ ಒಕ್ಕೂಟದ ಅಧ್ಯಕ್ಷ ಎಂ.ಆರ್.ಶ್ರೀನಿವಾಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಯೋಗಿ ಆದಿತ್ಯನಾಥ್ ರವರು ಜನರು ಅತ್ಯಂತ ಗೌರವದಿಂದ ಕಾಣುವ ಗೋರಕನಾಥ್ ಮಂದಿರದ ‘ಮಹಂತ’. ಅನೇಕ ಸೇವೆಗಳನ್ನ ಮಾಡಿ ದೇಶದಲ್ಲಿ ಅಜರಾಮರವಾಗಿರುವ ನಾಥ ಪರಂಪರೆಯಿಂದ ಬಂದವರು ಅವರು. ಕರ್ನಾಟಕದ ಆದಿ ಚುಂಚನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳು ಕೂಡ ಅದೇ ಪರಂಪರೆಗೆ ಸೇರಿದವರು. ಹಾಗಾಗಿಯೇ ಯೋಗಿ ಆದಿತ್ಯನಾಥ್ ಹಾಗೂ ನಿರ್ಮಲಾನಂದ ಶ್ರೀ ಗಳು ಆತ್ಮೀಯರು. ಯೋಗಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾದಾಗ ಖುದ್ದು ನಮ್ಮ ನಿರ್ಮಲಾನಂದ ಶ್ರೀ ಗಳು ಉತ್ತರ ಪ್ರದೇಶಕ್ಕೆ ತೆರಳಿ ಅಭಿನಂದಿಸಿದ್ದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago