ರಾಜ್ಯ ನ್ಯೂಸ್

ಒಕ್ಕಲಿಗರ ಶ್ರೇಷ್ಠ ಸ್ವಾಮೀಜಿ ಯೋಗಿ ಆದಿತ್ಯನಾಥ್ ಗೆ ಅಪಮಾನ! ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಒಕ್ಕಲಿಗರು..

ಕರ್ನಾಟಕದ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಹಲವಾರು ಹೊಸ ವಾದ ವಿವಾದಗಳು ಹುಟ್ಟಿ ಕೊಳ್ಳುತ್ತಿವೆ. ಪ್ರಚಾರದ ಭರಾಟೆಯಲ್ಲಿ ನಾಯಕರುಗಳು ನಾಲಗೆಗಳನ್ನು ಹರಿಬಿಡುತ್ತಿದ್ದಾರೆ. ಎಲ್ಲಿ ಹೇಗೆ ಮಾತನಾಡಬೇಕು ಎಂಬುದನ್ನು ನಮ್ಮ ನಾಯಕರುಗಳು ಮರೆತಂತೆ ಕಾಣುತ್ತಿದೆ. ಈ ಸಾಲಿಗೆ ಇದೀಗ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿರುವ ದಿನೇಶ್ ಗುಂಡೂರಾವ್ ಅವರು ಸೇರ್ಪಡೆಯಾಗಿದ್ದಾರೆ. ಅವರು ಮೊನ್ನೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಗ್ಗೆ ಆಡಿದ ಮಾತೊಂದು ಇದೀಗ ರಾಜ್ಯಾದ್ಯಂತ ಕಿಚ್ಚು ಹಚ್ಚಿದೆ. ದಿನೇಶ್ ಗುಂಡೂರಾವ್ ವಿರುದ್ಧ ರಾಜ್ಯದ ಮೂಲೆ ಮೂಲೆಯಲ್ಲಿಯೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

‘ಯೋಗಿ ಆದಿತ್ಯನಾಥ್ ಅವರು ಕರ್ನಾಟಕಕ್ಕೆ ಬಂದರೆ ಅವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ’ ಎಂದು ದಿನೇಶ್ ಗುಂಡೂರಾವ್ ಅವರು ಪ್ರಚೋದನಕಾರಿ ಹೇಳಿಕೆಯನ್ನು ನೀಡಿದ್ದರು. ಇದು ಅಕ್ಷರಶಃ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹಾಗೂ ಯೋಗಿಯವರ ಅಭಿಮಾನಿಗಳನ್ನು ಕೆರಳಿಸಿತ್ತು. ರಾಜ್ಯದ ಹಲವೆಡೆ ದಿನೇಶ್ ಗುಂಡೂರಾವ್ ಅವರ ಮೇಲೆ ಪ್ರಕರಣಗಳು ದಾಖಲಾಗಿದೆ. ಬಿಜೆಪಿ ಈಗಾಗಲೇ ಚುನಾವಣಾ ಆಯೋಗಕ್ಕೂ ದೂರು ನೀಡಿದೆ. ಬಿಜೆಪಿಯ ಅಗ್ರಗಣ್ಯ ನಾಯಕರು ದಿನೇಶ್ ಗುಂಡೂರಾವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನೇಶ್ ಗುಂಡೂರಾವ್ ವಿರುದ್ಧ ಹಲವಾರು ಅಭಿಯಾನಗಳು ಪ್ರಾರಂಭವಾಗುತ್ತಿದೆ. ತಕ್ಷಣವೇ ದಿನೇಶ್ ಗುಂಡೂರಾವ್ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕೆಂದು ರಾಹುಲ್ ಗಾಂಧಿಯವರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿರುವ ಮಹಾಂತ ಯೋಗಿ ಆದಿತ್ಯನಾಥರು ನಾಥ ಪರಂಪರೆಗೆ ಸೇರಿದವರಾಗಿದ್ದಾರೆ. ಯೋಗಿ ಆದಿತ್ಯನಾಥರ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ನಾಥ ಪರಂಪರೆಯನ್ನು ಆರಾಧಿಸುವ ಕರ್ನಾಟಕದ ಒಕ್ಕಲಿಗ ಸಮುದಾಯವನ್ನು ಅಪಮಾನ ಮಾಡಲಾಗಿದೆ ಎಂದು ಒಕ್ಕಲಿಗ ಸಮುದಾಯದವರು ಆರೋಪಿಸಿದ್ದಾರೆ. ಯೋಗಿ ಆದಿತ್ಯನಾಥರನ್ನು ಅವಮಾನ ಮಾಡುವ ಮೂಲಕ ವಿವಾದದ ಕಿಡಿ ಆಗಿರುವ ದಿನೇಶ್ ಗುಂಡೂರಾವ್ ಅವರನ್ನು ಯಾವುದೇ ಕಾರಣಕ್ಕೂ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ರಾಜ್ಯ ಒಕ್ಕಲಿಗ ಒಕ್ಕೂಟದ ಅಧ್ಯಕ್ಷ ಎಂ.ಆರ್.ಶ್ರೀನಿವಾಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಯೋಗಿ ಆದಿತ್ಯನಾಥ್ ರವರು ಜನರು ಅತ್ಯಂತ ಗೌರವದಿಂದ ಕಾಣುವ ಗೋರಕನಾಥ್ ಮಂದಿರದ ‘ಮಹಂತ’. ಅನೇಕ ಸೇವೆಗಳನ್ನ ಮಾಡಿ ದೇಶದಲ್ಲಿ ಅಜರಾಮರವಾಗಿರುವ ನಾಥ ಪರಂಪರೆಯಿಂದ ಬಂದವರು ಅವರು. ಕರ್ನಾಟಕದ ಆದಿ ಚುಂಚನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳು ಕೂಡ ಅದೇ ಪರಂಪರೆಗೆ ಸೇರಿದವರು. ಹಾಗಾಗಿಯೇ ಯೋಗಿ ಆದಿತ್ಯನಾಥ್ ಹಾಗೂ ನಿರ್ಮಲಾನಂದ ಶ್ರೀ ಗಳು ಆತ್ಮೀಯರು. ಯೋಗಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾದಾಗ ಖುದ್ದು ನಮ್ಮ ನಿರ್ಮಲಾನಂದ ಶ್ರೀ ಗಳು ಉತ್ತರ ಪ್ರದೇಶಕ್ಕೆ ತೆರಳಿ ಅಭಿನಂದಿಸಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago