Featured

ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಿದ ‘ಫೊನಿ’ ಚಂಡಮಾರುತ -Vishwanews24

ಭುವನೇಶ್ವರ:  ಫೊನಿ ಚಂಡಮಾರುತ ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಿದ್ದು, ಚಂಡಮಾರುತದ ವೇಗಕ್ಕೆ ಪುರಿ ಕಡಲ ತೀರದಲ್ಲಿನ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ, ವಿದ್ಯುತ್ ಸೇವೆ ಸ್ಥಗಿತವಾಗಿದೆ.

ಬರೊಬ್ಬರಿ ಪ್ರತೀ ಗಂಟೆಗೆ 200 ಕಿ.ಮೀ ವೇಗದಲ್ಲಿ ಫೊನಿ ಚಂಡಮಾರುತ ಪುರಿ ಕಡಲ ತೀರಕ್ಕೆ ಅಪ್ಪಳಿಸಿದ್ದು, ಅಲ್ಲಲ್ಲಿ ಭೂ ಕುಸಿತವಾದ ವರದಿಯಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.. ಚಂಡ ಮಾರುತದಿಂದಾಗಿ ಒಡಿಶಾ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕೇರಳದಲ್ಲಿ ಮುಂಜಾನೆಯಿಂದಲೇ ಭಾರಿ ಪ್ರಮಾಣದ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ. ಆಂಧ್ರದ ಕರಾವಳಿಯಲ್ಲೂ ಭಾರೀ ಮಳೆಸುರಿಯುತ್ತಿದ್ದು, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿಯೂ ಭಾರೀ ಮಳೆ ಬೀಳುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಫೋನಿ ಚಂಡಮಾರುತ ಗಂಟೆಗೆ 200 ಕಿ.ಮೀ ವೇಗದಲ್ಲಿ ಪುರಿ ಕಡಲ ತೀರಕ್ಕೆ ಅಪ್ಪಳಿಸಿದ್ದು, ಭೂ ಕುಸಿತವಾಗಿದೆ. ವಿದ್ಯುತ್ ಕೂಡ ಸ್ಥಗಿತವಾಗಿದೆ.

ಚಂಡಮಾರುತದಿಂದಾಗಿ ಒಡಿಶಾ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕೇರಳದಲ್ಲಿ ಭಾರಿ ಪ್ರಮಾಣದ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ. ಆಂಧ್ರದ ಕರಾವಳಿಯಲ್ಲೂ ಭಾರೀ ಮಳೆ ಸುರಿಯುತ್ತಿದ್ದು, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿಯೂ ಭಾರೀ ಮಳೆ ಬೀಳುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಇನ್ನು ಇಂದು ಮಧ್ಯಾಹ್ನದ ಹೊತ್ತಿಗೆ ಫೊನಿ ಚಂಡಮಾರುತ ಒಡಿಶಾ ಕರಾವಳಿಯ ಗೋಪಾಲಪುರ ಮತ್ತು ಚಾಂದಬಾಲಿ ನಡುವೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 14 ಜಿಲ್ಲೆಗಳು ಹಾನಿ ಎದುರಿಸಲಿದ್ದು, ಅಪಾಯದ ಪ್ರದೇಶದ ನಿವಾಸಿಗಳ ತೆರವು ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ಒಡಿಶಾದಲ್ಲಿ ಶನಿವಾರದವರೆಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಕೆಲ ಖಾಸಗಿ ಕಂಪನಿಗಳೂ ಕೂಡ ರಜೆ ಘೋಷಣೆ ಮಾಡಿವೆ.

ಮುಂಜಾಗ್ರತಾ ಕ್ರಮವಾಗಿ ಇದುವರೆಗೂ 11 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಒಡಿಶಾದ ಪಾಲಿಗೆ ಎರಡು ದಶಕದಲ್ಲಿಯೇ ಅತ್ಯಂತ ಪ್ರಬಲ ಚಂಡಮಾರುತ ಎನಿಸಿಕೊಳ್ಳಲಿರುವ ಫೊನಿ ಅಬ್ಬರದಿಂದ ಜೀವಹಾನಿ ತಪ್ಪಿಸಲು ಕೈಗೊಂಡಿರುವ ಬಹುದೊಡ್ಡ ತೆರವು ಕಾರ್ಯಾಚರಣೆ ಇದಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago