ಭುವನೇಶ್ವರ: ಫೊನಿ ಚಂಡಮಾರುತ ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಿದ್ದು, ಚಂಡಮಾರುತದ ವೇಗಕ್ಕೆ ಪುರಿ ಕಡಲ ತೀರದಲ್ಲಿನ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ, ವಿದ್ಯುತ್ ಸೇವೆ ಸ್ಥಗಿತವಾಗಿದೆ.
ಬರೊಬ್ಬರಿ ಪ್ರತೀ ಗಂಟೆಗೆ 200 ಕಿ.ಮೀ ವೇಗದಲ್ಲಿ ಫೊನಿ ಚಂಡಮಾರುತ ಪುರಿ ಕಡಲ ತೀರಕ್ಕೆ ಅಪ್ಪಳಿಸಿದ್ದು, ಅಲ್ಲಲ್ಲಿ ಭೂ ಕುಸಿತವಾದ ವರದಿಯಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.. ಚಂಡ ಮಾರುತದಿಂದಾಗಿ ಒಡಿಶಾ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕೇರಳದಲ್ಲಿ ಮುಂಜಾನೆಯಿಂದಲೇ ಭಾರಿ ಪ್ರಮಾಣದ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ. ಆಂಧ್ರದ ಕರಾವಳಿಯಲ್ಲೂ ಭಾರೀ ಮಳೆಸುರಿಯುತ್ತಿದ್ದು, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿಯೂ ಭಾರೀ ಮಳೆ ಬೀಳುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಫೋನಿ ಚಂಡಮಾರುತ ಗಂಟೆಗೆ 200 ಕಿ.ಮೀ ವೇಗದಲ್ಲಿ ಪುರಿ ಕಡಲ ತೀರಕ್ಕೆ ಅಪ್ಪಳಿಸಿದ್ದು, ಭೂ ಕುಸಿತವಾಗಿದೆ. ವಿದ್ಯುತ್ ಕೂಡ ಸ್ಥಗಿತವಾಗಿದೆ.
ಚಂಡಮಾರುತದಿಂದಾಗಿ ಒಡಿಶಾ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕೇರಳದಲ್ಲಿ ಭಾರಿ ಪ್ರಮಾಣದ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ. ಆಂಧ್ರದ ಕರಾವಳಿಯಲ್ಲೂ ಭಾರೀ ಮಳೆ ಸುರಿಯುತ್ತಿದ್ದು, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿಯೂ ಭಾರೀ ಮಳೆ ಬೀಳುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಇನ್ನು ಇಂದು ಮಧ್ಯಾಹ್ನದ ಹೊತ್ತಿಗೆ ಫೊನಿ ಚಂಡಮಾರುತ ಒಡಿಶಾ ಕರಾವಳಿಯ ಗೋಪಾಲಪುರ ಮತ್ತು ಚಾಂದಬಾಲಿ ನಡುವೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 14 ಜಿಲ್ಲೆಗಳು ಹಾನಿ ಎದುರಿಸಲಿದ್ದು, ಅಪಾಯದ ಪ್ರದೇಶದ ನಿವಾಸಿಗಳ ತೆರವು ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ಒಡಿಶಾದಲ್ಲಿ ಶನಿವಾರದವರೆಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಕೆಲ ಖಾಸಗಿ ಕಂಪನಿಗಳೂ ಕೂಡ ರಜೆ ಘೋಷಣೆ ಮಾಡಿವೆ.
ಮುಂಜಾಗ್ರತಾ ಕ್ರಮವಾಗಿ ಇದುವರೆಗೂ 11 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಒಡಿಶಾದ ಪಾಲಿಗೆ ಎರಡು ದಶಕದಲ್ಲಿಯೇ ಅತ್ಯಂತ ಪ್ರಬಲ ಚಂಡಮಾರುತ ಎನಿಸಿಕೊಳ್ಳಲಿರುವ ಫೊನಿ ಅಬ್ಬರದಿಂದ ಜೀವಹಾನಿ ತಪ್ಪಿಸಲು ಕೈಗೊಂಡಿರುವ ಬಹುದೊಡ್ಡ ತೆರವು ಕಾರ್ಯಾಚರಣೆ ಇದಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…