ಒಡಿಶಾ ರೈಲು ಅಪಘಾತ: ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ – Vishwanews24
ಒಡಿಶಾ ರೈಲು ಅಪಘಾತ: ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ
ಒಡಿಶಾ: ನಿನ್ನೆ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆಯ ಬಹಾನ್ ರೈಲ್ವೆ ನಿಲ್ದಾಣದಲ್ಲಿ ಮೂರು ರೈಲುಗಳು ಅಪಘಾತಗೊಂಡಿದ್ದವು. ಈ ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದಾರೆ.
ಬಾಲಸೋರ್ ನಲ್ಲಿ ಸಂಭವಿಸಿದ ರೈಲು ಅಪಘಾತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
ಅವರಿಗೆ ರೈಲ್ವೆ ಸಚಿವರು ಘಟನೆ ಸಂಬಂಧ ಮಾಹಿತಿಯನ್ನು ನೀಡಿದ್ದಾರೆ.
#WATCH | Odisha: Visuals from the site of #BalasoreTrainAccident where PM Modi has reached to take stock of the tragic accident that has left 261 people dead and over 900 people injured so far.#OdishaTrainAccident pic.twitter.com/fkcASxgZu1
— ANI (@ANI) June 3, 2023
ಇದೀಗ ರೈಲು ಅಪಘಾತ ಸ್ಥಳಕ್ಕೆ ಆಗಮಿಸಿರುವಂತ ಪ್ರಧಾನಿ ನರೇಂದ್ರ ಮೋದಿಯವರು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಮೀನು ಸಾಗಾಟದ ಲಾರಿ : ಇಬ್ಬರಿಗೆ ಗಂಭೀರ ಗಾಯ – Vishwanews24
ಬಹನಾಗ ರೈಲ್ವೆ ನಿಲ್ದಾಣದಿಂದ ಗಾಯಾಳುಗಳನ್ನು ದಾಖಲಿಸಿರುವಂತ ಆಸ್ಪತ್ರೆಗೆ ತೆರಳಿ, ಅವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರು ಪರಿಶೀಲನೆ ನಡೆಸಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
