ಭುವನೇಶ್ವರ, : ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಿಜೆಡಿ ಸೋತ ಬಳಿಕ ಇದೀಗ ನಿರ್ಗಮಿತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ರಾಜೀನಾಮೆ ನೀಡಿದ್ದಾರೆ.
ನವೀನ್ ಪಟ್ನಾಯಕ್ ಅವರು ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಘುಬರ್ ದಾಸ್ ಅವರನ್ನು ಭೇಟಿ ಮಾಡಿದ್ದಾರೆ. ಆ ನಂತರ ರಾಜ್ಯಪಾಲರಿಗೆ ತನ್ನ ರಾಜೀನಾಮೆ ಪತ್ರವನ್ನು ನವೀನ್ ಪಟ್ನಾಯಕ್ ಸಲ್ಲಿಸಿದ್ದಾರೆ.
ಒಡಿಶಾ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ನಿನ್ನೆ ಚುನಾವಣಾ ಆಯೋಗ ಪ್ರಕಟಿಸಿತು. ಈ ಫಲಿತಾಂಶದ ಪ್ರಕಾರ ಬಿಜೆಪಿಯು 71 ಸ್ಥಾನಗಳನ್ನು ಗೆದ್ದರೆ ನವೀನ್ ಪಟ್ನಾಯಕ್ ಅವರ ಬಿಜೆಡಿ ಕೇವಲ 51 ಸ್ಥಾನವನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಬಿಜೆಡಿಯು 24 ವರ್ಷಗಳ ಬಳಿಕ ತನ್ನ ಅಧಿಕಾರವನ್ನು ಕಳೆದುಕೊಂಡಿದೆ. ಇನ್ನು ಒಡಿಶಾದಲ್ಲಿ 147 ವಿಧಾನಸಭಾ ಸ್ಥಾನಗಳಿದ್ದು, ಸರ್ಕಾರ ರಚನೆಗೆ ಬಹುಮತಕ್ಕೆ 74 ಸ್ಥಾನಗಳ ಅಗತ್ಯವಿದೆ. ಇನ್ನು ಕಾಂಗ್ರೆಸ್ 14 ಸ್ಥಾನಗಳನ್ನು ಪಡೆದುಕೊಂಡಿದೆ.
2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಡಿ 112 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ 23 ಸ್ಥಾನಗಳನ್ನು, ಕಾಂಗ್ರೆಸ್ 9 ಸ್ಥಾನಗಳನ್ನು, ಸಿಪಿಐ(ಎಂ) ಕೇವಲ 1 ಸ್ಥಾನವನ್ನು ಪಡೆದುಕೊಂಡಿತ್ತು.
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…
ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…