ಭುವನೇಶ್ವರ, : ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಿಜೆಡಿ ಸೋತ ಬಳಿಕ ಇದೀಗ ನಿರ್ಗಮಿತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ರಾಜೀನಾಮೆ ನೀಡಿದ್ದಾರೆ.
ನವೀನ್ ಪಟ್ನಾಯಕ್ ಅವರು ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಘುಬರ್ ದಾಸ್ ಅವರನ್ನು ಭೇಟಿ ಮಾಡಿದ್ದಾರೆ. ಆ ನಂತರ ರಾಜ್ಯಪಾಲರಿಗೆ ತನ್ನ ರಾಜೀನಾಮೆ ಪತ್ರವನ್ನು ನವೀನ್ ಪಟ್ನಾಯಕ್ ಸಲ್ಲಿಸಿದ್ದಾರೆ.
ಒಡಿಶಾ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ನಿನ್ನೆ ಚುನಾವಣಾ ಆಯೋಗ ಪ್ರಕಟಿಸಿತು. ಈ ಫಲಿತಾಂಶದ ಪ್ರಕಾರ ಬಿಜೆಪಿಯು 71 ಸ್ಥಾನಗಳನ್ನು ಗೆದ್ದರೆ ನವೀನ್ ಪಟ್ನಾಯಕ್ ಅವರ ಬಿಜೆಡಿ ಕೇವಲ 51 ಸ್ಥಾನವನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಬಿಜೆಡಿಯು 24 ವರ್ಷಗಳ ಬಳಿಕ ತನ್ನ ಅಧಿಕಾರವನ್ನು ಕಳೆದುಕೊಂಡಿದೆ. ಇನ್ನು ಒಡಿಶಾದಲ್ಲಿ 147 ವಿಧಾನಸಭಾ ಸ್ಥಾನಗಳಿದ್ದು, ಸರ್ಕಾರ ರಚನೆಗೆ ಬಹುಮತಕ್ಕೆ 74 ಸ್ಥಾನಗಳ ಅಗತ್ಯವಿದೆ. ಇನ್ನು ಕಾಂಗ್ರೆಸ್ 14 ಸ್ಥಾನಗಳನ್ನು ಪಡೆದುಕೊಂಡಿದೆ.
2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಡಿ 112 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ 23 ಸ್ಥಾನಗಳನ್ನು, ಕಾಂಗ್ರೆಸ್ 9 ಸ್ಥಾನಗಳನ್ನು, ಸಿಪಿಐ(ಎಂ) ಕೇವಲ 1 ಸ್ಥಾನವನ್ನು ಪಡೆದುಕೊಂಡಿತ್ತು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…