ಭುವನೇಶ್ವರ : ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಬಾಲಸೋರ್ನ ಬಹನಾಗ ನಿಲ್ದಾಣದ ಬಳಿ ಡಿಕ್ಕಿ ಹೊಡೆಡ ಪರಿಣಾಮ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 240 ಕ್ಕೆ ಏರಿಕೆಯಾಗಿದೆ.
ಚೆನ್ನೈ-ಕೊರೊಮಂಡೆಲ್ ಎಕ್ಸ್ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲು ಮುಖಾಮುಖಿ ಡಿಕ್ಕಿಯಾಗಿದ್ದವು. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿತು. 12841 ಎಕ್ಸ್ಪ್ರೆಸ್ ರೈಲು ಡಿಕ್ಕಿಯಾದ ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ, ಭೀಕರ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದಾರೆ.
ಒಡಿಶಾ ರೈಲು ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ 10 ಲಕ್ಷ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದೆ
ಈ ಕುರಿತು ಮಾಹಿತಿ ನೀಡಿದಂತ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದಲ್ಲಿ ಮೃತಪಟ್ಟವರಿಗೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ., ಸಣ್ಣಪುಟ್ಟ ಗಾಯಗೊಂಡವರಿಗೆ 50,000 ರೂ ಪರಿಹಾರ ನೀಡಲಾಗುವುದು ಎಂದು ಘೋಷಿದರು.
ಸಹಾಯವಾಣಿ ಆರಂಭ
ಬಾಲಸೋರ್ ನ ಬಹನಾಗ ನಿಲ್ದಾಣದ ಬಳಿ ಶಾಲಿಮಾರ್-ಚೈನ್ನೈ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಗೂಡ್ಸ್ ಗಾಡಿಗೆ ಡಿಕ್ಕಿಯಾಗಿ ಹಳಿತಪ್ಪಿದ ಬೆನ್ನಲ್ಲೇ, ಬೆಂಗಳೂರು-ಹೌರಾ ರೈಲು ಕೂಡ ಹಳಿತಪ್ಪಿ 3-4 ಬೋಗಿಗಳು ಜಖಂಗೊಂಡಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ನೈರುತ್ಯ ರೈಲ್ವೆ ಇಲಾಖೆಯಿಂದ ಸಹಾಯವಾಣಿ ಸಂಖ್ಯೆಯನ್ನು ಕೂಡ ಆರಂಭಿಸಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಅವರು, ಒಡಿಶಾದ ಬಾಲಸೋರ್ ನ ಬಹನಾಗದಲ್ಲಿ ಸಂಜೆ 7 ಗಂಟೆ ಸುಮಾರಿಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ನ 10-12 ಬೋಗಿಗಳು ಬಾಲೇಶ್ವರ್ ಬಳಿ ಹಳಿ ತಪ್ಪಿ ವಿರುದ್ಧ ಹಳಿಗೆ ಬಿದ್ದಿವೆ ಎಂದಿದ್ದಾರೆ.
ಇನ್ನೂ ಈ ರೈಲಿನ ಸ್ವಲ್ಪ ಸಮಯದ ನಂತರ ಯಶವಂತಪುರದಿಂದ ಹೌರಾಗೆ ತೆರಳುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಅದರ 3-4 ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿಸಿದ್ದಾರೆ.
ಇದೀಗ ನೈರುತ್ಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ಸುರಕ್ಷತೆಗಾರಿ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಿದೆ. ಸಂಬಂಧಪಟ್ಟ ಕುಟುಂಬಸ್ಥರು ಸಂಪರ್ಕಿಸುವಂತೆ ತಿಳಿಸಿದೆ.
ಹೀಗಿವೆ ನೈಋತ್ಯ ರೈಲ್ವೆ ಸ್ಥಾಪಿಸಿದ ಸಹಾಯವಾಣಿ ಸಂಖ್ಯೆಗಳು
ಬೆಂಗಳೂರು 080-22356409
ಬಂಗಾರಪೇಟೆ: 08153 255253
ಕುಪ್ಪಂ : 8431403419
SMVB : 09606005129
KJM :+91 88612 03980
.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…