Featured

ಒಣಗಿದ ತುಟಿಗಳಿಂದ ಮುಕ್ತಿ ಪಡೆಯಲು ಈ ಕೆಳಗಿನ ಮನೆ ಮದ್ದುಗಳನ್ನು ಬಳಸಿ.. – Vishwanews24

ಒಡೆಯುವ ತುಟಿಗಳನ್ನು ರಕ್ಷಣೆ ಮಾಡುವುದು ಅತ್ಯಂತ ಮುಖ್ಯವಾಗಿರುತ್ತದೆ.ತುಟಿಗಳು ಒಣಗಿದಾಗ ಸಾಮಾನ್ಯವಾಗಿ ನಾಲಿಗೆಯಿಂದ ಸವರಿ ಎಂಜಲು ಮಾಡುತ್ತೇವೆ. ಆದರೆ, ಇದರಿಂದ ತುಟಿಗಳು ಮತ್ತಷ್ಟು ಒಣಗುತ್ತವೆ.
ಇದನ್ನು ನಿರ್ಲಕ್ಷ್ಯಿಸಿದರೆ, ತುಟಿಗಳ ಅಂದ ಹಾಳಾಗುತ್ತದೆ. ಕೆಲವೊಮ್ಮೆ ಒಡೆದ ತುಟಿಗಳಿಂದ ರಕ್ತ ಬರುವುದೂ ಉಂಟು, ಈ ವೇಳೆ ಸಾಕಷ್ಟು ಉರಿ, ನೋವು ಕಾಣಿಸಿಕೊಳ್ಳುತ್ತದೆ.
ಒಣಗಿದ ತುಟಿಗಳಿಂದ ಮುಕ್ತಿ ಪಡೆಯಲು ಕೆಲ ಪರಿಹಾರಗಳು ಇಲ್ಲಿವೆ…
ಕೊಬ್ಬರಿ ಎಣ್ಣೆ: ತುಟಿಗಳು ಮೃದುವಾಗಿರಲು ಕೊಬ್ಬರಿ ಎಣ್ಣೆ ಅತ್ಯುತ್ತಮವಾದ ಎಣ್ಣೆಯಾಗಿದೆ. ಕೊಬ್ಬರಿಎಣ್ಣೆ ಪರಿಣಾಮಕಾರಿಯಾದ ಮಾಯಿಶ್ಚರೈಸರ್ ಕೂಡ ಹೌಡು. ಒಣಗಿದ ಚರ್ಮದವರು ಚರ್ಮ ಮೃದುವಾಗಿಸಲು ಇದನ್ನು ಬಳಕೆ ಮಾಡಬಹುದು.
ಕ್ಯಾರೆಟ್ ಬೀಜದ ಎಣ್ಣೆ: ಕ್ಯಾರೆಟ್ ಬೀಜದ ಎಣ್ಮೆ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಈ ಎಣ್ಣೆಯನ್ನು ರೋಗ ನಿರೋಧಕವಾಗಿಯೂ ಬಳಕೆ ಮಾಡಲಾಗುತ್ತದೆ. ಚರ್ಮ ಹಾಳಾಗಿರುವುದನ್ನು ರಕ್ಷಣೆ ಮಾಡುತ್ತದೆ.
ಹರಳೆಣ್ಣೆ: ಹರಳೆಣ್ಣೆಯನ್ನು ಸಾಮಾನ್ಯವಾಗಿ ಚರ್ಮದ ಉರಿ ಹಾಗೂ ಊತಕ್ಕೆ ಬಳಕೆ ಮಾಡಲಾಗುತ್ತದೆ. ಒಡೆದ ಚರ್ಮ ಅಥವಾ ತುಟಿಗಳಿಗೆ ಇದನ್ನು ಹಚ್ಚಿದಾಗ ಒಡೆದ ಚರ್ಮ ಕೂಡುವುದಕ್ಕೆ ಇದು ಸಹಾಯ ಮಾಡುತ್ತದೆ.
ವೀಟ್ ಜರ್ಮ್ ಆಯಿಲ್: ವೀಟ್ ಜರ್ಮ್ ಆಯಿಲ್ ಅತ್ಯುತ್ತಮ ಎಣ್ಣೆಯಾಗಿದ್ದು, ಅತೀ ಹೆಚ್ಚಿನ ಕೊಬ್ಬಿನಾಮ್ಲಗಳನ್ನು ಹೊಂದಿದೆ. ಇದು ನೈಸರ್ಗಿಕ ವಿಟಮಿನ್ ಇ ಗುಣವನ್ನು ಹೊಂದಿದ್ದು, ಚರ್ಮವನ್ನು ಪೋಷಣೆ ಮಾಡುತ್ತದೆ. ತುಟಿಗಳು ಮೃದುವಾಗಿರುವಂತೆ ನೋಡಿಕೊಳ್ಳುತ್ತದೆ.
Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

10 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

14 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

14 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

15 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

15 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

16 hours ago