Featured

ಒಬ್ಬನೇ ಒಬ್ಬ ಅಕ್ರಮ ವಲಸಿಗನಿಗೆ ದೇಶದಲ್ಲಿ ಉಳಿದುಕೊಳ್ಳಲು ಅವಕಾಶ ನೀಡೋಲ್ಲ : ಅಮಿತ್‌ ಶಾ -Vishwanews24

ಗುವಾಹಟಿ : ‘ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು ಮತ್ತು ಅಕ್ರಮವಾಗಿ ವಲಸೆ ಬಂದವರಿಗೆ ಇಲ್ಲಿ ಉಳಿಯಲು ಅವಕಾಶ ನೀಡುವುದಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾನುವಾರ ಸ್ಪಷ್ಟಪಡಿಸಿದರು.

ದೇಶದಲ್ಲಿ ಒಬ್ಬನೇ ಅಕ್ರಮ ವಲಸಿಗರಿಗೆ ಉಳಿದುಕೊಳ್ಳಲು ಇನ್ಮುಂದೆ ಜಾಗವಿಲ್ಲ ಎಂದು ಬಿಜೆಪಿ ಚಾಣಕ್ಯ ಅಮಿತ್ ಶಾ ಅಸ್ಸಾಂನಲ್ಲಿ ಗುಡುಗಿದ್ದಾರೆ.

ಈಶಾನ್ಯ ಮಂಡಳಿಯ (ಎನ್‌ಇಸಿ) ಅಧ್ಯಕ್ಷರೂ ಆಗಿರುವ ಶಾ ಅವರು ಭಾನುವಾರ ಎನ್‌ಇಸಿಯ 68ನೇ ಅಧಿವೇಶನದಲ್ಲಿ ಈಶಾನ್ಯದ ಎಂಟು ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದರು.

ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ತಮ್ಮ ಮೊದಲ ಅಸ್ಸಾಂ ಭೇಟಿಯಲ್ಲಿ ರಾಷ್ಟ್ರೀಯ ಪೌರತ್ವ ನೊಂದಣಿ ಬಗ್ಗೆ ಅಮಿತ್ ಶಾ ಮಾತನಾಡಿದ್ದಾರೆ.

ಎನ್,ಆರ್.ಸಿ ಕುರಿತಾಗಿ ವಿವಿಧ ರೀತಿಯ ಪ್ರಶ್ನೆಗಳು, ಅಭಿಪ್ರಾಯ ವ್ಯಕ್ತವಾಗುತ್ತಿದೆ ಆದರೆ ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಕೇಂದ್ರ ಸರ್ಕಾರ ಬದ್ದವಾಗಿದ್ದು, ಒಬ್ಬನೇ ಒಬ್ಬ ಅಕ್ರಮ ವಲಸಿಗನಿಗೆ ದೇಶದಲ್ಲಿ ಉಳಿದುಕೊಳ್ಳಲು ಅವಕಾಶ ನೀಡೋಲ್ಲ ಎಂದು ಅಮಿತ್ ಶಾ ಗುಡುಗಿದ್ದಾರೆ.

ಈಶಾನ್ಯ ರಾಜ್ಯಗಳಿಗೆ ನೀಡಲಾಗಿರುವ ವಿಶೇಷ ಸ್ಥಾನಮಾನ 371 ಅನುಚ್ಚೇದವನ್ನು ರದ್ದು ಮಾಡುವ ಯಾವುದೇ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಹೇಳಿದರು. ರಾಷ್ಟ್ರೀಯ ಪೌರತ್ವ ನೊಂದಣಿ ದಾಖಲೆ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, 19 ಲಕ್ಷಕ್ಕೂ ಅಧಿಕ ಜನರು ಎನ್ ಆರ್ ಸಿ ಪಟ್ಟಿಯಿಂದ ಹೊರಗುಳಿಸಿದ್ದು, 3.11 ಕೋಟಿ ಜನರನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದರು .

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

24 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

49 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

58 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 hour ago