ಮುಂಬೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಯೊಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆ ಮಾಡುತ್ತಾರೆ. ಒಬ್ಬ ಚಾಯ್ವಾಲಾ ದೇಶದ ಪ್ರಧಾನಿ ಆಗುವಂತೆ ಪ್ರಜಾಪ್ರಭುತ್ವವನ್ನು ಉಳಿಸಿಕೊಂಡು ಬಂದಿದ್ದೇವೆ ಎಂದು ಸಂಸದೀಯ ನಾಯಕ ಹಾಗು ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಮಲ್ಲಿಕಾರ್ಜುನ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರ ಉಸ್ತುವಾರಿಯನ್ನು ವಹಿಸಿಕೊಂಡಿರುವ ಮಲ್ಲಿಕಾರ್ಜುನ್ ಖರ್ಗೆ ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಮೋದಿಯವರು 43 ವರ್ಷಗಳ ಹಿಂದಿನ ದೇಶದ ತುರ್ತು ಪರಿಸ್ಥಿತಿಯ ಬಗ್ಗೆ ಪದೇ ಪದೇ ಮಾತನಾಡುತ್ತಾರೆ. ಆದರೆ ಕಳೆದ 4 ವರ್ಷಗಳಿಂದ ದೇಶದಲ್ಲಿನ ಅಘೋಷಿಯ ತುರ್ತು ಪರಿಸ್ಥಿತಿಯ ಬಗ್ಗೆ ಏಕೆ ಮಾತನಾಡಲ್ಲ ಎಂದು ಪ್ರಶ್ನೆ ಮಾಡಿದರು.
ರೈತ ಬಾಂಧವರಿಗೆ ಕೇಂದ್ರ ಜಾರಿಗೆ ತಂದಿರುವ ಯೋಜನೆಗಳು ವಿಫಲಗೊಂಡಿವೆ. ಈ ಹಿನ್ನೆಲೆಯಲ್ಲಿ ರೈತರ ಆತ್ಮಹತ್ಯೆಯ ಸಂಖ್ಯೆಯೂ ಹೆಚ್ಚುತ್ತಿದೆ. ರೈತರಿಗೆ ಹೊಸ ಸಾಲಗಳು ಸಿಗುತ್ತಿಲ್ಲ. ಮಾರುಕಟ್ಟೆ ನಿಧಾನಗತಿಯಲ್ಲಿ ಸಾಗುತ್ತಿದ್ದು, ರೈತರಿಗೆ ಕನಿಷ್ಠ ಬೆಂಬಲ ಬೆಲೆಯೂ ಸಿಗದಂತಾಗಿದೆ ಎಂದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…