ಮುಂಬೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಯೊಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪ್ರಶ್ನೆ ಮಾಡುತ್ತಾರೆ. ಒಬ್ಬ ಚಾಯ್ವಾಲಾ ದೇಶದ ಪ್ರಧಾನಿ ಆಗುವಂತೆ ಪ್ರಜಾಪ್ರಭುತ್ವವನ್ನು ಉಳಿಸಿಕೊಂಡು ಬಂದಿದ್ದೇವೆ ಎಂದು ಸಂಸದೀಯ ನಾಯಕ ಹಾಗು ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಮಲ್ಲಿಕಾರ್ಜುನ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರ ಉಸ್ತುವಾರಿಯನ್ನು ವಹಿಸಿಕೊಂಡಿರುವ ಮಲ್ಲಿಕಾರ್ಜುನ್ ಖರ್ಗೆ ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಮೋದಿಯವರು 43 ವರ್ಷಗಳ ಹಿಂದಿನ ದೇಶದ ತುರ್ತು ಪರಿಸ್ಥಿತಿಯ ಬಗ್ಗೆ ಪದೇ ಪದೇ ಮಾತನಾಡುತ್ತಾರೆ. ಆದರೆ ಕಳೆದ 4 ವರ್ಷಗಳಿಂದ ದೇಶದಲ್ಲಿನ ಅಘೋಷಿಯ ತುರ್ತು ಪರಿಸ್ಥಿತಿಯ ಬಗ್ಗೆ ಏಕೆ ಮಾತನಾಡಲ್ಲ ಎಂದು ಪ್ರಶ್ನೆ ಮಾಡಿದರು.
ರೈತ ಬಾಂಧವರಿಗೆ ಕೇಂದ್ರ ಜಾರಿಗೆ ತಂದಿರುವ ಯೋಜನೆಗಳು ವಿಫಲಗೊಂಡಿವೆ. ಈ ಹಿನ್ನೆಲೆಯಲ್ಲಿ ರೈತರ ಆತ್ಮಹತ್ಯೆಯ ಸಂಖ್ಯೆಯೂ ಹೆಚ್ಚುತ್ತಿದೆ. ರೈತರಿಗೆ ಹೊಸ ಸಾಲಗಳು ಸಿಗುತ್ತಿಲ್ಲ. ಮಾರುಕಟ್ಟೆ ನಿಧಾನಗತಿಯಲ್ಲಿ ಸಾಗುತ್ತಿದ್ದು, ರೈತರಿಗೆ ಕನಿಷ್ಠ ಬೆಂಬಲ ಬೆಲೆಯೂ ಸಿಗದಂತಾಗಿದೆ ಎಂದರು.
ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು…