ಬೆಂಗಳೂರು: ಒಬ್ಬ ಹೇಡಿ ಮಾಡಿದ ಕೃತ್ಯದಿಂದ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ. ನಮ್ಮ ಧರ್ಮದಲ್ಲಿ ಇಂತಹ ಕೃತ್ಯ ಮಾಡಿ ಎಂದು ಎಲ್ಲಿಯೂ ಹೇಳಿಲ್ಲ ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಹೇಳಿಕೆ ನೀಡಿದ್ದಾರೆ.
ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದ ಟೈಲರ್ನನ್ನು ಬರ್ಬರವಾಗಿ ಹತ್ಯೆಗೈದ ಘಟನೆಗೆ ಜನರು ಮುಸ್ಲಿಂ ಸಮುದಾಯವನ್ನು ದೂಷಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ರಜಾಕ್, ಈ ಕೃತ್ಯ ಮಾಡಿದವರು ಹೇಡಿಗಳು. ಇವರ ಹಿಂದೆ ಯಾರೋ ಇದ್ದಾರೆ. ಎಲ್ಲಾ ಮುಗಿದು ಸಮಾಧಾನವಾಗಿದ್ದ ಸಂದರ್ಭದಲ್ಲಿ ಇಂತಹ ಘಟನೆ ನಡೆದಿದೆ ಎಂದು ಹೇಳಿದರು.
ನಾನು ಈ ಘಟನೆಯನ್ನು ಖಂಡಿಸುತ್ತೇನೆ. ಅವರ ಹಿಂದೆ ಯಾರೋ ಇದ್ದಾರೆ ಎನ್ನುವುದು ಸತ್ಯ. ಘಟನೆ ಬಗ್ಗೆ ಸರ್ಕಾರ ತಕ್ಷಣ ತನಿಖೆ ನಡೆಸಿ, ಅವರನ್ನು ಗಲ್ಲಿಗೇರಿಸಬೇಕು. ನೂಪುರ್ ಶರ್ಮಾರನ್ನು ಕೂಡಾ ಬಿಡದೇ ಬಂಧಿಸಬೇಕು. ಅವರನ್ನೂ ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಒಳಪಡಿಸಬೇಕು. ಇಂತಹ ಘಟನೆಗಳಿಂದ ಒಂದೇ ಸಮುದಾಯವನ್ನು ಟಾರ್ಗೆಟ್ ಮಾಡಬೇಡಿ ಎಂದು ಅಬ್ದುಲ್ ರಜಾಕ್ ಮನವಿ ಮಾಡಿಕೊಂಡರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…