Featured

ಒಬ್ಬ ಹೇಡಿ ಮಾಡಿದ ಕೃತ್ಯದಿಂದ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ : ಅಬ್ದುಲ್ ರಜಾಕ್ – Vishwanews24

ಒಬ್ಬ ಹೇಡಿ ಮಾಡಿದ ಕೃತ್ಯದಿಂದ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ

ನಮ್ಮ ಧರ್ಮದಲ್ಲಿ ಇಂತಹ ಕೃತ್ಯ ಮಾಡಿ ಎಂದು ಎಲ್ಲಿಯೂ ಹೇಳಿಲ್ಲ..

ಸರ್ಕಾರ ತಕ್ಷಣ ತನಿಖೆ ನಡೆಸಿ, ಅವರನ್ನು ಗಲ್ಲಿಗೇರಿಸಿ..

ಬೆಂಗಳೂರು: ಒಬ್ಬ ಹೇಡಿ ಮಾಡಿದ ಕೃತ್ಯದಿಂದ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ. ನಮ್ಮ ಧರ್ಮದಲ್ಲಿ ಇಂತಹ ಕೃತ್ಯ ಮಾಡಿ ಎಂದು ಎಲ್ಲಿಯೂ ಹೇಳಿಲ್ಲ ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಹೇಳಿಕೆ ನೀಡಿದ್ದಾರೆ.

ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದ ಟೈಲರ್‌ನನ್ನು ಬರ್ಬರವಾಗಿ ಹತ್ಯೆಗೈದ ಘಟನೆಗೆ ಜನರು ಮುಸ್ಲಿಂ ಸಮುದಾಯವನ್ನು ದೂಷಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ರಜಾಕ್, ಈ ಕೃತ್ಯ ಮಾಡಿದವರು ಹೇಡಿಗಳು. ಇವರ ಹಿಂದೆ ಯಾರೋ ಇದ್ದಾರೆ. ಎಲ್ಲಾ ಮುಗಿದು ಸಮಾಧಾನವಾಗಿದ್ದ ಸಂದರ್ಭದಲ್ಲಿ ಇಂತಹ ಘಟನೆ ನಡೆದಿದೆ ಎಂದು ಹೇಳಿದರು.

ನಾನು ಈ ಘಟನೆಯನ್ನು ಖಂಡಿಸುತ್ತೇನೆ. ಅವರ ಹಿಂದೆ ಯಾರೋ ಇದ್ದಾರೆ ಎನ್ನುವುದು ಸತ್ಯ. ಘಟನೆ ಬಗ್ಗೆ ಸರ್ಕಾರ ತಕ್ಷಣ ತನಿಖೆ ನಡೆಸಿ, ಅವರನ್ನು ಗಲ್ಲಿಗೇರಿಸಬೇಕು. ನೂಪುರ್ ಶರ್ಮಾರನ್ನು ಕೂಡಾ ಬಿಡದೇ ಬಂಧಿಸಬೇಕು. ಅವರನ್ನೂ ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಒಳಪಡಿಸಬೇಕು. ಇಂತಹ ಘಟನೆಗಳಿಂದ ಒಂದೇ ಸಮುದಾಯವನ್ನು ಟಾರ್ಗೆಟ್ ಮಾಡಬೇಡಿ ಎಂದು ಅಬ್ದುಲ್ ರಜಾಕ್ ಮನವಿ ಮಾಡಿಕೊಂಡರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

22 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

23 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

23 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

23 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

23 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago