Featured

ಒಬ್ಬ ಹೇಡಿ ಮಾಡಿದ ಕೃತ್ಯದಿಂದ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ : ಅಬ್ದುಲ್ ರಜಾಕ್ – Vishwanews24

ಒಬ್ಬ ಹೇಡಿ ಮಾಡಿದ ಕೃತ್ಯದಿಂದ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ

ನಮ್ಮ ಧರ್ಮದಲ್ಲಿ ಇಂತಹ ಕೃತ್ಯ ಮಾಡಿ ಎಂದು ಎಲ್ಲಿಯೂ ಹೇಳಿಲ್ಲ..

ಸರ್ಕಾರ ತಕ್ಷಣ ತನಿಖೆ ನಡೆಸಿ, ಅವರನ್ನು ಗಲ್ಲಿಗೇರಿಸಿ..

ಬೆಂಗಳೂರು: ಒಬ್ಬ ಹೇಡಿ ಮಾಡಿದ ಕೃತ್ಯದಿಂದ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ. ನಮ್ಮ ಧರ್ಮದಲ್ಲಿ ಇಂತಹ ಕೃತ್ಯ ಮಾಡಿ ಎಂದು ಎಲ್ಲಿಯೂ ಹೇಳಿಲ್ಲ ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಹೇಳಿಕೆ ನೀಡಿದ್ದಾರೆ.

ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದ ಟೈಲರ್‌ನನ್ನು ಬರ್ಬರವಾಗಿ ಹತ್ಯೆಗೈದ ಘಟನೆಗೆ ಜನರು ಮುಸ್ಲಿಂ ಸಮುದಾಯವನ್ನು ದೂಷಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ರಜಾಕ್, ಈ ಕೃತ್ಯ ಮಾಡಿದವರು ಹೇಡಿಗಳು. ಇವರ ಹಿಂದೆ ಯಾರೋ ಇದ್ದಾರೆ. ಎಲ್ಲಾ ಮುಗಿದು ಸಮಾಧಾನವಾಗಿದ್ದ ಸಂದರ್ಭದಲ್ಲಿ ಇಂತಹ ಘಟನೆ ನಡೆದಿದೆ ಎಂದು ಹೇಳಿದರು.

ನಾನು ಈ ಘಟನೆಯನ್ನು ಖಂಡಿಸುತ್ತೇನೆ. ಅವರ ಹಿಂದೆ ಯಾರೋ ಇದ್ದಾರೆ ಎನ್ನುವುದು ಸತ್ಯ. ಘಟನೆ ಬಗ್ಗೆ ಸರ್ಕಾರ ತಕ್ಷಣ ತನಿಖೆ ನಡೆಸಿ, ಅವರನ್ನು ಗಲ್ಲಿಗೇರಿಸಬೇಕು. ನೂಪುರ್ ಶರ್ಮಾರನ್ನು ಕೂಡಾ ಬಿಡದೇ ಬಂಧಿಸಬೇಕು. ಅವರನ್ನೂ ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಒಳಪಡಿಸಬೇಕು. ಇಂತಹ ಘಟನೆಗಳಿಂದ ಒಂದೇ ಸಮುದಾಯವನ್ನು ಟಾರ್ಗೆಟ್ ಮಾಡಬೇಡಿ ಎಂದು ಅಬ್ದುಲ್ ರಜಾಕ್ ಮನವಿ ಮಾಡಿಕೊಂಡರು.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

1 day ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

2 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

2 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

2 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

2 days ago