ಬೆಂಗಳೂರು: ಒಬ್ಬ ಹೇಡಿ ಮಾಡಿದ ಕೃತ್ಯದಿಂದ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ. ನಮ್ಮ ಧರ್ಮದಲ್ಲಿ ಇಂತಹ ಕೃತ್ಯ ಮಾಡಿ ಎಂದು ಎಲ್ಲಿಯೂ ಹೇಳಿಲ್ಲ ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಹೇಳಿಕೆ ನೀಡಿದ್ದಾರೆ.
ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದ ಟೈಲರ್ನನ್ನು ಬರ್ಬರವಾಗಿ ಹತ್ಯೆಗೈದ ಘಟನೆಗೆ ಜನರು ಮುಸ್ಲಿಂ ಸಮುದಾಯವನ್ನು ದೂಷಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ರಜಾಕ್, ಈ ಕೃತ್ಯ ಮಾಡಿದವರು ಹೇಡಿಗಳು. ಇವರ ಹಿಂದೆ ಯಾರೋ ಇದ್ದಾರೆ. ಎಲ್ಲಾ ಮುಗಿದು ಸಮಾಧಾನವಾಗಿದ್ದ ಸಂದರ್ಭದಲ್ಲಿ ಇಂತಹ ಘಟನೆ ನಡೆದಿದೆ ಎಂದು ಹೇಳಿದರು.
ನಾನು ಈ ಘಟನೆಯನ್ನು ಖಂಡಿಸುತ್ತೇನೆ. ಅವರ ಹಿಂದೆ ಯಾರೋ ಇದ್ದಾರೆ ಎನ್ನುವುದು ಸತ್ಯ. ಘಟನೆ ಬಗ್ಗೆ ಸರ್ಕಾರ ತಕ್ಷಣ ತನಿಖೆ ನಡೆಸಿ, ಅವರನ್ನು ಗಲ್ಲಿಗೇರಿಸಬೇಕು. ನೂಪುರ್ ಶರ್ಮಾರನ್ನು ಕೂಡಾ ಬಿಡದೇ ಬಂಧಿಸಬೇಕು. ಅವರನ್ನೂ ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಒಳಪಡಿಸಬೇಕು. ಇಂತಹ ಘಟನೆಗಳಿಂದ ಒಂದೇ ಸಮುದಾಯವನ್ನು ಟಾರ್ಗೆಟ್ ಮಾಡಬೇಡಿ ಎಂದು ಅಬ್ದುಲ್ ರಜಾಕ್ ಮನವಿ ಮಾಡಿಕೊಂಡರು.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…