ಮಸ್ಕತ್: ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿ 13 ಮಂದಿ ಭಾರತೀಯರು ಸೇರಿದಂತೆ ಒಟ್ಟು 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ದೇಶದ ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ.
ಟ್ಯಾಂಕರ್ ನಲ್ಲಿದ್ದವರೆಲ್ಲರು ನಾವತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೊಮೊರೊಸ್ ಧ್ವಜ ಇರುವ ತೈಲ ಟ್ಯಾಂಕರ್ ಪ್ರೆಸ್ಟೀಜ್ ಫಾಲ್ಕನ್ ಸಿಬ್ಬಂದಿಯಲ್ಲಿ 13 ಭಾರತೀಯರು ಮತ್ತು 3 ಮಂದಿ ಶ್ರೀಲಂಕಾದವರು ಇದ್ದರು. ಒಮಾನಿ ಬಂದರು ಡುಕ್ಮ್ ಬಳಿ ರಾಸ್ ಮದರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಹಡಗು ಮುಳುಗಡೆಯಾಗಿದೆ.
ಟ್ಯಾಂಕರ್ ಒಮಾನ್ ಬಂದರಿನ ಏಡೆನ್ಗೆ ತೆರಳುತ್ತಿತ್ತು. ತೈಲ ಟ್ಯಾಂಕರ್ ನೀರಿನಲ್ಲಿ ಮುಳುಗಡೆಯಾಗಿದ್ದು, ತಲೆಕೆಳಗಾಗಿ ಬಿದ್ದಿದೆ. ಆದರೆ ಹಡಗು ಸ್ಥಿರವಾಗಿದೆಯೇ ಅಥವಾ ಸಮುದ್ರಕ್ಕೆ ತೈಲ ಸೋರಿಕೆಯಾಗುತ್ತಿದೆಯೇ ಎಂಬುದು ಇನ್ನೂ ತಿಳಿದುಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…