ಬೆಂಗಳೂರು: ಅಡುಗೆ ಎಣ್ಣೆ ಮರುಬಳಕೆ ಮಾಡುತ್ತಿರುವ ಮಾಹಿತಿ ಬೆನ್ನಲ್ಲೇ ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನು ಮರುಬಳಸದಂತೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ.
ಎಣ್ಣೆ ಉದ್ದಿಮೆದಾರರು ಹಾಗೂ ಬೇಕರಿ, ಹೋಟೆಲ್ನವರಿಗೆ ಖಡಕ್ ನಿರ್ದೇಶನ ಹೊರಡಿಸಿದ್ದಾರೆ. ಈ ಮೂಲಕ ಅಡುಗೆ ಎಣ್ಣೆ ತಯಾರಿಕಾ ಘಟಕದವರು ಕಡ್ಡಾಯವಾಗಿ ಆರು ತಿಂಗಳಿಗೊಮ್ಮೆ ಗುಣಮಟ್ಟ ವಿಶ್ಲೇಷಣೆ ತಪಾಸಣೆ ಮಾಡಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಹೆಚ್ಚಾದ ಹೃದಯಘಾತ ಪ್ರಕರಣದ ಬಳಿಕ ಆರೋಗ್ಯ ಇಲಾಖೆ ಎಚ್ಚೆತ್ತಿದೆ. ಕೆಲ ಅಡುಗೆ ಎಣ್ಣೆಗಳಿಂದ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಳವಾಗಿ ಹೃದಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಈ ಕುರಿತು ತಜ್ಞರ ಜೊತೆ ಪರಾಮರ್ಶಿಸಿ ಆಹಾರ ಸುರಕ್ಷತಾ ಇಲಾಖೆಯಿಂದ ಸೂಚನೆ ನೀಡಿದೆ. ಸದ್ಯ 32,68,999 ಲೀಟರ್ ಬಳಕೆ ಮಾಡಿದ ಎಣ್ಣೆಯಿದ್ದು, ಸೂಕ್ತ ವಿಲೇವಾರಿ ಹಾಗೂ ಬಯೋ ಡಿಸೇಲ್ ಘಟಕಕ್ಕೆ ರವಾನಿಸುವಂತೆ ಹೇಳಿದೆ.
ಪ್ಯಾಕಿಂಗ್, ಲೇಬಲಿಂಗ್ ಸ್ವಚ್ಛತೆ, ಎ&ಡಿ ವಿಟಮಿನ್ ಇರುವ ಎಣ್ಣೆ ಮಾರಾಟ ಮಾಡುವಂತೆ ತಿಳಿಸಿದ್ದಾರೆ. ಜೊತೆಗೆ ಟ್ರಾನ್ಸ್ ಫ್ಯಾಟ್ ಕಡಿಮೆ ಇರುವ ಎಣ್ಣೆಯನ್ನು ಬಳಕೆ ಮಾಡಬೇಕು. ಒಂದು ಬಾರಿ ಉಪಯೋಗಿಸಿದ ಅಡುಗೆ ಎಣ್ಣೆಯನ್ನು ಮತ್ತೆ ಮರುಬಳಕೆ ಮಾಡಬಾರದು ಎಂದು ಹೋಟೆಲ್ ಬೇಕರಿಯವರಿಗೆ ಸೂಚಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…