ಉಡುಪಿ: ಒಲಿಂಪಿಕ್ಸ್ ಪದಕ ನನ್ನ ಗುರಿ ಎಂದು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ವೇಟ್ ಲಿಫ್ಟಿಂಗ್ ಬೆಳ್ಳಿ ಪದಕ ಗೆದ್ದಿರುವ ಕುಂದಾಪುರದ ಗುರುರಾಜ್ ಹೇಳಿದ್ದಾರೆ. ಗುರುವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನಾನು ಹುಟ್ಟೂರಿಗೆ ಬಂದ ಸಂದರ್ಭ ಭವ್ಯ ಸ್ವಾಗತ ದೊರೆತಿದೆ. ಇತರ ಕ್ರೀಡಾಪಟುಗಳಿಗೂ ಇದೇ ಮಾದರಿಯ ಪ್ರೋತ್ಸಾಹ ದೊರೆಯಲಿ. ಆಗ ಮಾತ್ರ ಹಳ್ಳಿಯ ಕ್ರೀಡಾಪಟುಗಳು ಕೂಡ ಸಾಧನೆ ಮಾಡಲು ಸಾಧ್ಯ ಎಂದರು. 2015ರಿಂದ ಪಂಜಾಬ್ನ ಪಟಿಯಾಲಾದಲ್ಲಿ ಬೆಳಗ್ಗೆ ಮತ್ತು ಮಧ್ಯಾಹ್ನ ತಲಾ 2 ತಾಸು, ಸಂಜೆ 3 ತಾಸು ನಿರಂತರ ಅಭ್ಯಾಸ ಮಾಡುತ್ತಿದ್ದೇನೆ. ಸೆಪ್ಟಂಬರ್ನಲ್ಲಿ ನಡೆಯುವ ಏಷ್ಯನ್ ಗೇಮ್ಸ್ಗೆ ಸಿದ್ಧನಾಗುತ್ತಿದ್ದೇನೆ. ಮುಂದಿನ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲುವ ಗುರಿ ಇದೆ. ಕಾಮನ್ವೆಲ್ತ್ನಲ್ಲಿ ಎತ್ತಿರುವ ಭಾರಕ್ಕಿಂತ 20ರಿಂದ 30 ಕೆಜಿ ಜಾಸ್ತಿ ಎತ್ತಿದರೆ ಒಲಿಂಪಿಕ್ಸ್ ಪದಕ ಗೆಲ್ಲಬಹುದಾಗಿದೆ ಎಂದರು.
ಪ್ರೋತ್ಸಾಹ ಸಾಲದು
ನಾಲ್ಕು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಒಟ್ಟು 2 ಚಿನ್ನ, ತಲಾ 1 ಬೆಳ್ಳಿ ಮತ್ತು ಕಂಚು ಗೆದ್ದುಕೊಂಡಿದ್ದೇನೆ. ಏಕಲವ್ಯ ಪ್ರಶಸ್ತಿ ದೊರೆತಿದೆ. ಉಳಿದಂತೆ ಸರಕಾರಗಳ ಪ್ರೋತ್ಸಾಹ ಅಷ್ಟಾಗಿ ಸಿಕ್ಕಿಲ್ಲ. ಎ. 20ರಂದು ರಕ್ಷಣಾ ಇಲಾಖೆಯಿಂದ ಸಮ್ಮಾನವಿದೆ ಎಂದು ಹೇಳಿದರು.
ಜಿಲ್ಲೆಗೆ ಹೆಮ್ಮೆ
ಸಮ್ಮಾನ ನಡೆಸಿದ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು, ಗುರುರಾಜ್ ಅವರು ಉಡುಪಿ ಜಿಲ್ಲೆಯವರಾಗಿರುವುದು ನಮಗೆ ಹೆಮ್ಮೆ ಮತ್ತು ಸಂತೋಷವನ್ನುಂಟು ಮಾಡಿದೆ. ಇವರು ಇತರರಿಗೂ ಸ್ಫೂರ್ತಿಯಾಗಿ ಮತ್ತಷ್ಟು ಮಂದಿ ಕ್ರೀಡೆಯಲ್ಲಿ ಸಾಧನೆ ಮಾಡುವಂತಾಗಲಿ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ, ಗುರುರಾಜ್ ಹುಟ್ಟೂರಿಗೆ ಆಗಮಿಸುತ್ತಿರುವ ಈ ಸಂದರ್ಭದಲ್ಲಿ ಜಿಲ್ಲಾಡಳಿತವೇ ವಿಮಾನ ನಿಲ್ದಾಣದಿಂದ ಅವರ ಮನೆಯವರೆಗೆ ವಾಹನ ವ್ಯವಸ್ಥೆ ಮಾಡಿದೆ. ಎ. 20ರಂದು ಅವರು ದಿಲ್ಲಿಗೆ ತೆರಳಲಿದ್ದಾರೆ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಅನುರಾಧಾ, ಸಿಇಒ ಶಿವಾನಂದ ಕಾಪಶಿ, ಗುರುರಾಜ್ ತಂದೆ ಮಹಾಬಲ ಪೂಜಾರಿ ಉಪಸ್ಥಿತರಿದ್ದರು.
ಜಿಲ್ಲೆಯ ಮತ ಜಾಗೃತಿ ಐಕಾನ್
ಮತದಾನ ಜಾಗೃತಿಗಾಗಿ ಗುರುರಾಜ ಅವರನ್ನು ಉಡುಪಿ ಜಿಲ್ಲೆಯ ಐಕಾನ್ ಆಗಿ ಜಿಲ್ಲಾಡಳಿತ ನಿಯೋಜಿಸುತ್ತಿದೆ ಎಂದು ಜಿಲ್ಲಾಧಿಕಾರಿ ಘೋಷಿಸಿದರು. ‘ಎಲ್ಲರೂ ತಪ್ಪದೇ ಮತದಾನ ಮಾಡಿ’ ಎಂಬ ಸಂದೇಶವನ್ನು ಒಳಗೊಂಡ ಗುರುರಾಜ್ ಅವರ ಧ್ವನಿಚಿತ್ರವನ್ನು ಮುದ್ರಿಸಿಕೊಳ್ಳಲಾಯಿತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…